ಆಳಂದ: ‘ಕನ್ನಡ ನಾಡು ನುಡಿ ಅಭಿಮಾನ ಬೆಳೆಸಲು ತಾಲ್ಲೂಕಿನಲ್ಲಿ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳು ನಿರಂತರವಾಗಿ ನಡೆಯಲಿವೆ’ ಎಂದು ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಹಣಮಂತ ಶೇರಿ ಹೇಳಿದರು.
ಕಸಾಪ ತಾಲ್ಲೂಕು ಘಟಕಕ್ಕೆ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಗುರುಭವನದಲ್ಲಿ ಶಿಕ್ಷಕ ಗೆಳೆಯರ ಬಳಗದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಎಲ್ಲರ ಸಹಕಾರದೊಂದಿಗೆ ವಿಚಾರ ಸಂಕಿರಣ, ವಿಚಾರಗೋಷ್ಠಿ ಏರ್ಪಡಿಸಿ ಸಾಹಿತ್ಯ, ಕಲೆ, ಸಂಸ್ಕೃತಿ ಬೆಳೆಸಲು ಆದ್ಯತೆ ನೀಡುವುದಾಗಿ ತಿಳಿಸಿದರು.