ನಗರದಲ್ಲಿ ಸೋಮವಾರ ಸಭೆ ನಡೆಸಿದ ಅವರು, ಕಾಮಗಾರಿಗಳ ಅರ್ಧ ಕೆಲಸ ಮುಗಿದು ಮೂರನೇ ತಂಡದ ಪರಿವೀಕ್ಷಣಾ ವರದಿಗಳ ಜೊತೆಗೆ ಬಿಲ್ ಸಲ್ಲಿಸಿ ನಾಲ್ಕೈದು ತಿಂಗಳು ಗತಿಸಿದರೂ ಬಿಲ್ ಪಾವತಿಯಾಗದ್ದರಿಂದ ಆರು ಜಿಲ್ಲೆಗಳ 300ಕ್ಕೂ ಅಧಿಕ ಕಾಮಗಾರಿಗಳು ಸ್ಥಗಿತಗೊಂಡಿವೆ. ಮಾರುಕಟ್ಟೆಯಲ್ಲಿ ದರಗಳು ಹೆಚ್ಚಾಗುತ್ತಿದ್ದು, ಯಾವುದೇ ದಂಡ ವಿಧಿಸದೇ ಕಾಮಗಾರಿ ಅವಧಿ ವಿಸ್ತರಿಸಬೇಕು ಎಂದು ಆಗ್ರಹಿಸಿದರು.