<p><strong>ಕಲಬುರ್ಗಿ:</strong> ಉತ್ತರ ಕರ್ನಾಟಕದಲ್ಲಿ ಹೆಚ್ಚಾಗಿ ಬೆಳೆಯುವ ಜೋಳ, ತೊಗರಿ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಬೆಳೆಯುವ ರಾಗಿಯನ್ನು ಪಡಿತರವಾಗಿ ನೀಡಲು ನಿರ್ಧರಿಸಲಾಗಿದ್ದು, ಏಪ್ರಿಲ್ 1ರಿಂದ ಜಾರಿಗೆ ಬರಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ, ಗ್ರಾಹಕ ವ್ಯವಹಾರಗಳ ಸಚಿವ ಉಮೇಶ ಕತ್ತಿ ಪ್ರಕಟಿಸಿದರು.</p>.<p>ನಗರದ ಡಿಎಆರ್ ಮೈದಾನದಲ್ಲಿ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಜೋಳ, ತೊಗರಿ, ರಾಗಿ ನೀಡಬೇಕು ಎಂಬುದು ಬಹಳ ದಿನಗಳ ಬೇಡಿಕೆಯಾಗಿತ್ತು. ಅದನ್ನು ಈಗ ಈಡೇರಿಸಲಾಗುತ್ತಿದೆ ಎಂದರು.</p>.<p>ಕೃಷಿ ಕಾಯ್ದೆ ವಾಪಸ್ ಇಲ್ಲ: ಸಂಸತ್ತಿನ 545 ಸಂಸದರು ಸೇರಿ ಅನುಮೋದಿಸಿದ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ. 70 ವರ್ಷ ಒಂದು ಕಾಯ್ದೆಯನ್ನು ಸಹಿಸಿಕೊಂಡಿದ್ದಾರೆ. ಹೊಸ ಕಾಯ್ದೆಯನ್ನು ಎರಡು ವರ್ಷಗಳಿಗಾದರೂ ಸಹಿಸಿಕೊಳ್ಳಲು ಆಗುವುದಿಲ್ಲವೇ ಎಂದು ಪ್ರಶ್ನಿಸಿದರು.</p>.<p>ಖಾತೆ ಹಂಚಿಕೆ ಅಸಮಾಧಾನವಿಲ್ಲ: ನನಗೆ ಆಹಾರ ಖಾತೆ ನೀಡಿರುವ ಬಗ್ಗೆ ಸಂಪೂರ್ಣ ತೃಪ್ತಿ ಇದೆ. ಆಹಾರ ಖಾತೆ ಬದಲಿಸಿ ಅಂಕಿ, ಸಂಖ್ಯೆ, ವಯಸ್ಕರ ಶಿಕ್ಷಣ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ ಎಂದರು.</p>.<p>ಕೃಷ್ಣಾ ನದಿ ನೀರಿನ ರಾಜ್ಯದ ಪಾಲನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಹಿಂದಿನ ಸಿದ್ದರಾಮಯ್ಯ ಸರ್ಕಾರ, ಕುಮಾರಸ್ವಾಮಿ ಸರ್ಕಾರ ಈಗ ಆಡಳಿತದಲ್ಲಿರುವ ಯಡಿಯೂರಪ್ಪ ಸರ್ಕಾರಗಳು ವಿಫಲವಾಗಿವೆ. ಕೋವಿಡ್ ನಿಂದಾಗಿ ನೀರಾವರಿ ಯೋಜನೆ ಚಾಲನೆ ಪಡೆದಿಲ್ಲ ಎಂದರು.</p>.<p>ಅನ್ಯಾಯವಾಗಲು ಬಿಡಲ್ಲ: ಉತ್ತರ ಕರ್ನಾಟಕಕ್ಕೆ ಅನ್ಯಾಯವಾದ ಸಂದರ್ಭದಲ್ಲಿ ಪ್ರತ್ಯೇಕ ರಾಜ್ಯಕ್ಕೆ ಬೇಡಿ ಇಟ್ಟಿದ್ದೆ. ಆದರೆ ಅದರ ಹಿಂದಿನ ಕಾಳಜಿ ಈ ಭಾಗ ಅಭಿವೃದ್ಧಿ ಆಗಬೇಕು ಎಂಬುದು. ಅಖಂಡ ಕರ್ನಾಟಕದಲ್ಲಿ ನನಗೆ ನಂಬಿಕೆ ಇದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ಉತ್ತರ ಕರ್ನಾಟಕದಲ್ಲಿ ಹೆಚ್ಚಾಗಿ ಬೆಳೆಯುವ ಜೋಳ, ತೊಗರಿ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಬೆಳೆಯುವ ರಾಗಿಯನ್ನು ಪಡಿತರವಾಗಿ ನೀಡಲು ನಿರ್ಧರಿಸಲಾಗಿದ್ದು, ಏಪ್ರಿಲ್ 1ರಿಂದ ಜಾರಿಗೆ ಬರಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ, ಗ್ರಾಹಕ ವ್ಯವಹಾರಗಳ ಸಚಿವ ಉಮೇಶ ಕತ್ತಿ ಪ್ರಕಟಿಸಿದರು.</p>.<p>ನಗರದ ಡಿಎಆರ್ ಮೈದಾನದಲ್ಲಿ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಜೋಳ, ತೊಗರಿ, ರಾಗಿ ನೀಡಬೇಕು ಎಂಬುದು ಬಹಳ ದಿನಗಳ ಬೇಡಿಕೆಯಾಗಿತ್ತು. ಅದನ್ನು ಈಗ ಈಡೇರಿಸಲಾಗುತ್ತಿದೆ ಎಂದರು.</p>.<p>ಕೃಷಿ ಕಾಯ್ದೆ ವಾಪಸ್ ಇಲ್ಲ: ಸಂಸತ್ತಿನ 545 ಸಂಸದರು ಸೇರಿ ಅನುಮೋದಿಸಿದ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ. 70 ವರ್ಷ ಒಂದು ಕಾಯ್ದೆಯನ್ನು ಸಹಿಸಿಕೊಂಡಿದ್ದಾರೆ. ಹೊಸ ಕಾಯ್ದೆಯನ್ನು ಎರಡು ವರ್ಷಗಳಿಗಾದರೂ ಸಹಿಸಿಕೊಳ್ಳಲು ಆಗುವುದಿಲ್ಲವೇ ಎಂದು ಪ್ರಶ್ನಿಸಿದರು.</p>.<p>ಖಾತೆ ಹಂಚಿಕೆ ಅಸಮಾಧಾನವಿಲ್ಲ: ನನಗೆ ಆಹಾರ ಖಾತೆ ನೀಡಿರುವ ಬಗ್ಗೆ ಸಂಪೂರ್ಣ ತೃಪ್ತಿ ಇದೆ. ಆಹಾರ ಖಾತೆ ಬದಲಿಸಿ ಅಂಕಿ, ಸಂಖ್ಯೆ, ವಯಸ್ಕರ ಶಿಕ್ಷಣ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ ಎಂದರು.</p>.<p>ಕೃಷ್ಣಾ ನದಿ ನೀರಿನ ರಾಜ್ಯದ ಪಾಲನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಹಿಂದಿನ ಸಿದ್ದರಾಮಯ್ಯ ಸರ್ಕಾರ, ಕುಮಾರಸ್ವಾಮಿ ಸರ್ಕಾರ ಈಗ ಆಡಳಿತದಲ್ಲಿರುವ ಯಡಿಯೂರಪ್ಪ ಸರ್ಕಾರಗಳು ವಿಫಲವಾಗಿವೆ. ಕೋವಿಡ್ ನಿಂದಾಗಿ ನೀರಾವರಿ ಯೋಜನೆ ಚಾಲನೆ ಪಡೆದಿಲ್ಲ ಎಂದರು.</p>.<p>ಅನ್ಯಾಯವಾಗಲು ಬಿಡಲ್ಲ: ಉತ್ತರ ಕರ್ನಾಟಕಕ್ಕೆ ಅನ್ಯಾಯವಾದ ಸಂದರ್ಭದಲ್ಲಿ ಪ್ರತ್ಯೇಕ ರಾಜ್ಯಕ್ಕೆ ಬೇಡಿ ಇಟ್ಟಿದ್ದೆ. ಆದರೆ ಅದರ ಹಿಂದಿನ ಕಾಳಜಿ ಈ ಭಾಗ ಅಭಿವೃದ್ಧಿ ಆಗಬೇಕು ಎಂಬುದು. ಅಖಂಡ ಕರ್ನಾಟಕದಲ್ಲಿ ನನಗೆ ನಂಬಿಕೆ ಇದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>