ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಕೋವಿಡ್–19 ಸೋಂಕು ವಿಶ್ವದಾದ್ಯಂತ ಹರಡಿ ಲಕ್ಷಾಂತರ ಜನರು ಜೀವ ಕಳೆದುಕೊಳ್ಳುತಿದ್ದಾರೆ. ಇದಕ್ಕೆ ಕಾರಣ ರೋಗ ಹರಡುವಿಕೆಯ ಬಗ್ಗೆ ಮತ್ತು ವಿಶ್ವಸಂಸ್ಥೆ ವಿಧಿಸಿರುವ ನಿಯಮಗಳನ್ನು ಪಾಲಿಸದೇ ಇರುವದು. ರೋಗವು ಅತ್ಯಂತ ವ್ಯಾಪಕವಾಗಿ ಹರಡುತ್ತಿರುವುದರಿಂದ ಕರ್ನಾಟಕ ಸರ್ಕಾರದ ಆದೇಶದಂತೆ ಗುಲಬರ್ಗಾ ವಿಶ್ವವಿದ್ಯಾಲಯದ ಎನ್ಎಸ್ಎಸ್ ಕೋಶವು ಕಲಬುರ್ಗಿ ನಗರ ಹಾಗೂ ಸುತ್ತಮುತ್ತಲಿನ ಹಳ್ಳಿಗಳಿಗೆ ವಾಹನದ ಮುಖಾಂತರ ತೆರಳಿ ವೈರಸ್ ಸೋಂಕು ತಡೆಯಲು ಮಾಸ್ಕ್,ಕೈ ತೊಳೆಯುವುದು ಹಾಗೂ ದೈಹಿಕ ಅಂತರವನ್ನು ಪಾಲನೆ ಮಾಡುವ ಕ್ರಮಗಳ ಕುರಿತು ಜನರಲ್ಲಿ ಧ್ವನಿವರ್ಧಕ ಮೂಲಕ ಜಾಗೃತಿ ಮೂಡಿಸಲಾಗುತ್ತದೆ’ ಎಂದರು.