<p><strong>ಚಿಂಚೋಳಿ</strong>: ಕೊರೊನಾ ಸೊಂಕು ಹರಡುವುದನ್ನು ತಡೆಯಲು ತಾಲ್ಲೂಕಿನ ಐನಾಪುರ ಹಾಲು ಉತ್ಪಾದಕರ ಸಹಕಾರ ಸಂಘ ವೈಜ್ಞಾನಿಕ ವಿಧಾನ ಅನುಸರಿಸಿ ಮಾದರಿಯಾಗಿದೆ.</p>.<p>ಸಂಘದ ಕಚೇರಿಯ ಒಳಗಡೆ ಹಾಗೂ ಹೊರಗಡೆ ಹಾಲು ಮಾರಾಟಕ್ಕೆ ಬರುವವರು ಒಬ್ಬರನ್ನು ಒಬ್ಬರು ಸ್ಪರ್ಶಿಸದಂತೆ ಮಾಡಲು ಅಂತರ ಕಾಯ್ದುಕೊಳ್ಳುವ ಮೂಲಕ ಕೊರೊನಾ ಹರಡದಂತೆ ಬ್ರೇಕ್ ಹಾಕಿದೆ. ನಿಷೇಧಾಜ್ಞೆ ಮಧ್ಯೆ ಗ್ರಾಮದ ರೈತರು ಸರತಿ ಸಾಲಿನಲ್ಲಿ ನಿಂತು ಹಾಲು ಮಾರಾಟ ಮಾಡಿ ಹೋಗುತ್ತಿದ್ದಾರೆ.</p>.<p>ಬುಧವಾರ ಸಂಜೆಯಿಂದ ಸಂಘದ ಕಟ್ಟಡದ ಒಳಗಡೆ ಹಾಗೂ ಹೊರಗಡೆ ವೃತ್ತಗಳನ್ನು ನಿರ್ಮಿಸಿದ್ದಾರೆ. ಪ್ರತಿ ಮೀಟರ್ ಅಂತರದಲ್ಲಿ ಎರಡು ಅಡಿ ಅಗಲದ ವೃತ್ತಾಕಾರದಲ್ಲಿ ಸುಣ್ಣದಿಂದ ಗುರುತು ಹಾಕಿ ಹಾಲು ಮಾರಾಟಗಾರರು ವೃತ್ತಗಳಲ್ಲಿ ನಿಂತು ತಮ್ಮ ಹಾಲು ಮಾರಾಟ ಮಾಡಿ ಮನೆಗಳಿಗೆ ಮರಳುತ್ತಿದ್ದಾರೆ.</p>.<p>ಸಂಘಕ್ಕೆ ನಿತ್ಯ 280 ಲೀಟರ್ ಹಾಲು ಸಂಗ್ರಹ ಆಗುತ್ತಿದೆ ಎನ್ನುತ್ತಾರೆ ಸಂಘದ ಅಧ್ಯಕ್ಷ ನಾಗಶೆಟ್ಟಿ ಮಾಲಿ ಪಾಟೀಲ. ರೈತರು ಸಂಘಕ್ಕೆ ಮಾರಾಟ ಮಾಡಿದ ಹಾಲು ಬೀದರ್ ಜಿಲ್ಲೆಯ ಕೂಡಾಂಬಲ್ ಹಾಲು ಶೀಥಲೀಕರಣ ಘಟಕಕ್ಕೆ ಕಳುಹಿಸಿ ಅಲ್ಲಿಂದ ಕಲಬುರ್ಗಿಯ ಕೆಎಂಎಫ್ ಗೆ ಕಳುಹಿಸಿ ಕೊಡಲಾಗುತ್ತದೆ ಎಂದರು.</p>.<p>ರೈತರು ತಮ್ಮ ಮನೆಗಳಿಂದ ಸಂಜೆ 7ರಿಂದ 8.30 ಗಂಟೆಗೆ ಹಾಗೂ ಬೆಳಿಗ್ಗೆ 6.30 ರಿಂದ 8 ಗಂಟೆವರೆಗೆ ಹಾಲು ತಂದು ಹಾಕುತ್ತಾರೆ. ಜನರ ಸಹಕಾರ ಚೆನ್ನಾಗಿದೆ ಎಂಬುದು ಕಾರ್ಯದರ್ಶಿ ವೈಜನಾಥ ಕೊಠಾರ ಅವರ ವಿವರಣೆ.</p>.<p>ಕೊರೊನಾ ಹರಡದಂತೆ ಏನು ಮಾಡಬೇಕು ಎಂದು ತೋಚದೆ ಚಿಂತಿತರಾಗಿದ್ದೆವು. ದಿನಸಿ ಅಂಗಡಿಗಳ ಎದುರು ಬಾಕ್ಸ್ ಹಾಕಿರುವುದು ಮಾಧ್ಯಮಗಳಿಂದ ತಿಳಿದಿತ್ತು. ಅದರಂತೆ ಸುರಕ್ಷತಾ ಕ್ರಮ ಕೈಗೊಂಡಿದ್ದೇವೆ ಎಂದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂಚೋಳಿ</strong>: ಕೊರೊನಾ ಸೊಂಕು ಹರಡುವುದನ್ನು ತಡೆಯಲು ತಾಲ್ಲೂಕಿನ ಐನಾಪುರ ಹಾಲು ಉತ್ಪಾದಕರ ಸಹಕಾರ ಸಂಘ ವೈಜ್ಞಾನಿಕ ವಿಧಾನ ಅನುಸರಿಸಿ ಮಾದರಿಯಾಗಿದೆ.</p>.<p>ಸಂಘದ ಕಚೇರಿಯ ಒಳಗಡೆ ಹಾಗೂ ಹೊರಗಡೆ ಹಾಲು ಮಾರಾಟಕ್ಕೆ ಬರುವವರು ಒಬ್ಬರನ್ನು ಒಬ್ಬರು ಸ್ಪರ್ಶಿಸದಂತೆ ಮಾಡಲು ಅಂತರ ಕಾಯ್ದುಕೊಳ್ಳುವ ಮೂಲಕ ಕೊರೊನಾ ಹರಡದಂತೆ ಬ್ರೇಕ್ ಹಾಕಿದೆ. ನಿಷೇಧಾಜ್ಞೆ ಮಧ್ಯೆ ಗ್ರಾಮದ ರೈತರು ಸರತಿ ಸಾಲಿನಲ್ಲಿ ನಿಂತು ಹಾಲು ಮಾರಾಟ ಮಾಡಿ ಹೋಗುತ್ತಿದ್ದಾರೆ.</p>.<p>ಬುಧವಾರ ಸಂಜೆಯಿಂದ ಸಂಘದ ಕಟ್ಟಡದ ಒಳಗಡೆ ಹಾಗೂ ಹೊರಗಡೆ ವೃತ್ತಗಳನ್ನು ನಿರ್ಮಿಸಿದ್ದಾರೆ. ಪ್ರತಿ ಮೀಟರ್ ಅಂತರದಲ್ಲಿ ಎರಡು ಅಡಿ ಅಗಲದ ವೃತ್ತಾಕಾರದಲ್ಲಿ ಸುಣ್ಣದಿಂದ ಗುರುತು ಹಾಕಿ ಹಾಲು ಮಾರಾಟಗಾರರು ವೃತ್ತಗಳಲ್ಲಿ ನಿಂತು ತಮ್ಮ ಹಾಲು ಮಾರಾಟ ಮಾಡಿ ಮನೆಗಳಿಗೆ ಮರಳುತ್ತಿದ್ದಾರೆ.</p>.<p>ಸಂಘಕ್ಕೆ ನಿತ್ಯ 280 ಲೀಟರ್ ಹಾಲು ಸಂಗ್ರಹ ಆಗುತ್ತಿದೆ ಎನ್ನುತ್ತಾರೆ ಸಂಘದ ಅಧ್ಯಕ್ಷ ನಾಗಶೆಟ್ಟಿ ಮಾಲಿ ಪಾಟೀಲ. ರೈತರು ಸಂಘಕ್ಕೆ ಮಾರಾಟ ಮಾಡಿದ ಹಾಲು ಬೀದರ್ ಜಿಲ್ಲೆಯ ಕೂಡಾಂಬಲ್ ಹಾಲು ಶೀಥಲೀಕರಣ ಘಟಕಕ್ಕೆ ಕಳುಹಿಸಿ ಅಲ್ಲಿಂದ ಕಲಬುರ್ಗಿಯ ಕೆಎಂಎಫ್ ಗೆ ಕಳುಹಿಸಿ ಕೊಡಲಾಗುತ್ತದೆ ಎಂದರು.</p>.<p>ರೈತರು ತಮ್ಮ ಮನೆಗಳಿಂದ ಸಂಜೆ 7ರಿಂದ 8.30 ಗಂಟೆಗೆ ಹಾಗೂ ಬೆಳಿಗ್ಗೆ 6.30 ರಿಂದ 8 ಗಂಟೆವರೆಗೆ ಹಾಲು ತಂದು ಹಾಕುತ್ತಾರೆ. ಜನರ ಸಹಕಾರ ಚೆನ್ನಾಗಿದೆ ಎಂಬುದು ಕಾರ್ಯದರ್ಶಿ ವೈಜನಾಥ ಕೊಠಾರ ಅವರ ವಿವರಣೆ.</p>.<p>ಕೊರೊನಾ ಹರಡದಂತೆ ಏನು ಮಾಡಬೇಕು ಎಂದು ತೋಚದೆ ಚಿಂತಿತರಾಗಿದ್ದೆವು. ದಿನಸಿ ಅಂಗಡಿಗಳ ಎದುರು ಬಾಕ್ಸ್ ಹಾಕಿರುವುದು ಮಾಧ್ಯಮಗಳಿಂದ ತಿಳಿದಿತ್ತು. ಅದರಂತೆ ಸುರಕ್ಷತಾ ಕ್ರಮ ಕೈಗೊಂಡಿದ್ದೇವೆ ಎಂದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>