<p><strong>ಕಲಬುರ್ಗಿ</strong>: ಇಲ್ಲಿನ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಕೋವಿಡ್-19 ಲ್ಯಾಬ್ಗೆ ಜಿಲ್ಲಾಡಳಿತದಿಂದ ₹ 84 ಲಕ್ಷ ಮೊತ್ತದ ಚೆಕ್ಕನ್ನು ವಿ.ವಿ. ಸಮ ಕುಲಪತಿ ಪ್ರೊ.ಜಿ.ಆರ್. ನಾಯಕ್ ಅವರಿಗೆ ಸಲ್ಲಿಸಲಾಯಿತು.</p>.<p>ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಸದ ಡಾ.ಉಮೇಶ ಜಾಧವ್ ಅಧ್ಯಕ್ಷತೆಯಲ್ಲಿ ನಡೆದ ದಿಶಾ ಸಭೆಯಲ್ಲಿ ಸಿಯುಕೆಯಲ್ಲಿ ಕೋವಿಡ್ ಪರೀಕ್ಷಾ ಕೇಂದ್ರ ಸ್ಥಾಪನೆಗೆ ಐಸಿಎಂಆರ್ ಅನುಮತಿ ನೀಡಲಾಗಿದ್ದರೂ ಯಾಕೆ ಲ್ಯಾಬ್ ಕಾರ್ಯಾರಂಭಗೊಂಡಿಲ್ಲ ಎಂದು ಪ್ರಶ್ನಿಸಲಾಯಿತು.</p>.<p>ಇದಕ್ಕೆ ಡಾ. ಜಿ.ಆರ್. ನಾಯಕ ಅವರು ಲ್ಯಾಬ್ ಗೆ ವಿ.ವಿ.ಯಿಂದ ₹ 35 ಲಕ್ಷ ಖರ್ಚು ಮಾಡಿ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಉಳಿದ ಹಣ ಕ್ರೋಡೀಕರಿಸಲಾಗುತ್ತಿದೆ ಎಂದರು.</p>.<p>ಇದಕ್ಕೆ ಸಂಸದರು ಉಳಿದ ₹ 84 ಲಕ್ಷವನ್ನು ಜಿಲ್ಲಾಡಳಿತ ದಿಂದ ನೀಡಲಾಗುವುದು ಎಂದು ಹೇಳಿ ಸಭೆಯಲ್ಲೆ ಚೆಕ್ ಬರೆಯಲು ಜಿಲ್ಲಾಧಿಕಾರಿ ಅವರಿಗೆ ಸೂಚಿಸಿದರು. 10 ನಿಮಿಷದಲ್ಲಿ ಯೇ ಚೆಕ್ ಸಿದ್ದಗೊಳಿಸಿ ಸಮ ಕುಲಪತಿಗಳಿಗೆ ಸಲ್ಲಿಸಲಾಯಿತು. ವಾರದೊಳಗೆ ಉದ್ಘಾಟನೆಯಾಗಬೇಕೆಂದು ಸಂಸದ ಜಾಧವ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ</strong>: ಇಲ್ಲಿನ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಕೋವಿಡ್-19 ಲ್ಯಾಬ್ಗೆ ಜಿಲ್ಲಾಡಳಿತದಿಂದ ₹ 84 ಲಕ್ಷ ಮೊತ್ತದ ಚೆಕ್ಕನ್ನು ವಿ.ವಿ. ಸಮ ಕುಲಪತಿ ಪ್ರೊ.ಜಿ.ಆರ್. ನಾಯಕ್ ಅವರಿಗೆ ಸಲ್ಲಿಸಲಾಯಿತು.</p>.<p>ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಸದ ಡಾ.ಉಮೇಶ ಜಾಧವ್ ಅಧ್ಯಕ್ಷತೆಯಲ್ಲಿ ನಡೆದ ದಿಶಾ ಸಭೆಯಲ್ಲಿ ಸಿಯುಕೆಯಲ್ಲಿ ಕೋವಿಡ್ ಪರೀಕ್ಷಾ ಕೇಂದ್ರ ಸ್ಥಾಪನೆಗೆ ಐಸಿಎಂಆರ್ ಅನುಮತಿ ನೀಡಲಾಗಿದ್ದರೂ ಯಾಕೆ ಲ್ಯಾಬ್ ಕಾರ್ಯಾರಂಭಗೊಂಡಿಲ್ಲ ಎಂದು ಪ್ರಶ್ನಿಸಲಾಯಿತು.</p>.<p>ಇದಕ್ಕೆ ಡಾ. ಜಿ.ಆರ್. ನಾಯಕ ಅವರು ಲ್ಯಾಬ್ ಗೆ ವಿ.ವಿ.ಯಿಂದ ₹ 35 ಲಕ್ಷ ಖರ್ಚು ಮಾಡಿ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಉಳಿದ ಹಣ ಕ್ರೋಡೀಕರಿಸಲಾಗುತ್ತಿದೆ ಎಂದರು.</p>.<p>ಇದಕ್ಕೆ ಸಂಸದರು ಉಳಿದ ₹ 84 ಲಕ್ಷವನ್ನು ಜಿಲ್ಲಾಡಳಿತ ದಿಂದ ನೀಡಲಾಗುವುದು ಎಂದು ಹೇಳಿ ಸಭೆಯಲ್ಲೆ ಚೆಕ್ ಬರೆಯಲು ಜಿಲ್ಲಾಧಿಕಾರಿ ಅವರಿಗೆ ಸೂಚಿಸಿದರು. 10 ನಿಮಿಷದಲ್ಲಿ ಯೇ ಚೆಕ್ ಸಿದ್ದಗೊಳಿಸಿ ಸಮ ಕುಲಪತಿಗಳಿಗೆ ಸಲ್ಲಿಸಲಾಯಿತು. ವಾರದೊಳಗೆ ಉದ್ಘಾಟನೆಯಾಗಬೇಕೆಂದು ಸಂಸದ ಜಾಧವ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>