ಹೊಲಿಗೆ ಯಂತ್ರವಾಗಲಿ, ಅಂಗನವಾಡಿಗಳಿಗೆ ಆಟಿಕೆಗಳ ಖರೀದಿಗೆ ಸಂಬಂಧಿಸಿದಂತೆ ಇನ್ನೂ ಯಾವುದೇ ಆದೇಶ ನೀಡಿಲ್ಲ. ಅಲ್ಲದೇ, ಇವುಗಳನ್ನು ತಜ್ಞರಿರುವ ತಾಂತ್ರಿಕ ಸಮಿತಿ ಪರಿಶೀಲಿಸಿ ಟೆಂಡರ್ ಅಂತಿಮಗೊಳಿಸುತ್ತದೆ. ಹೀಗಾಗಿ, ಯಾವುದೇ ಬಗೆಯ ಅವ್ಯವಹಾರ, ಭ್ರಷ್ಟಾಚಾರ ನಡೆಸಲು ಕಲ್ಯಾಣ ಕರ್ನಾಟಕಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಸೇಡಂ ಅವರು ಅವಕಾಶ ನೀಡುವುದಿಲ್ಲ. ಈ ಬಗ್ಗೆ ಕೆಲವೇ ದಿನಗಳಲ್ಲಿ ಸಂಘದ ವತಿಯಿಂದ ವಿಸ್ತೃತ ಮಾಹಿತಿ ನೀಡಲಿದ್ದೇವೆ ಎಂದು ಸಂಘದ ಕಾರ್ಯದರ್ಶಿ ಭೀಮಾಶಂಕರ ತೆಗ್ಗಳ್ಳಿ ತಿಳಿಸಿದರು.