‘ನಮ್ಮ ಹೊಲದಲ್ಲಿ ಬೆಳೆದ ಹೆಸರು ಕಾಳುಗಳನ್ನು ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಚಿಮ್ಮನಚೋಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಖರೀದಿ ಕೆಂದ್ರದಲ್ಲಿ ಪರೀಕ್ಷಿಸಿ ಕಾಟಾ ಮಾಡಿಸಲಾಗಿದೆ. ಸಂಘದ ಕಾರ್ಯದರ್ಶಿಗಳು ಪರಿಶೀಲಿಸಿ ಕಾಳುಗಳನ್ನು ಪಡೆದಿದ್ದಾರೆ. ಅವುಗಳನ್ನು ಚಿಂಚೋಳಿಯ ಉಗ್ರಾಣಕ್ಕೆ ಕಳುಹಿಸಲಾಗಿದೆ. ಆದರೆ ಉಗ್ರಾಣದಲ್ಲಿ ಗುಣಮಟ್ಟ ಪರಿಶೀಲಿಸುವವರೊಬ್ಬರು ಇವುಗಳು ಸರಿಯಿಲ್ಲ ಎಂದು ವಾಪಸ್ ಕಳುಹಿಸಿದ್ದಾರೆ’ ಎಂದರು.