<p><strong>ಕಲಬುರ್ಗಿ:</strong> ಕೋವಿಡ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ, ನಗರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ನ್ಯಾಯಾಲಯಗಳ ಕಾರ್ಯಕಲಾಪಗಳನ್ನು ಆ. 8ರವರೆಗೂ ಸ್ಥಗಿತಗೊಳಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಆರ್.ಜೆ. ಸತೀಶ್ ಸಿಂಗ್ ಅವರು ತಿಳಿಸಿದ್ದಾರೆ.</p>.<p>ಈ ಅವಧಿಯಲ್ಲಿ ಯಾವುದೇ ನ್ಯಾಯಾಂಗ ಮತ್ತು ಇತರೆ ನ್ಯಾಯಾಂಗ ಹಾಗೂ ಆಡಳಿತಾತ್ಮಕ ಕೆಲಸ ಕಾರ್ಯಗಳನ್ನು ರದ್ದುಪಡಿಸಲಾಗಿದೆ. ಅದೇ ರೀತಿ ನ್ಯಾಯಾಲಯದಿಂದ ಜುಲೈ 31ರಂದು ಹೊರಡಿಸಿದ ಅಧಿಸೂಚನೆಯನ್ನು ಸಹ ರದ್ದುಪಡಿಲಾಗಿದೆ. ಈ ಅವಧಿಯಲ್ಲಿ ಕೇವಲ ತುರ್ತು ಕಲಾಪಗಳ ಪ್ರಕರಣಗಳನ್ನು ಇ-ಮೇಲ್ ಮಾತ್ರ ಸ್ವೀಕರಿಸಲಾಗುವುದು ಹಾಗೂ ವಿಡಿಯೊ ಸಂದರ್ಶನಗಳ ಮೂಲಕ ಆಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.</p>.<p>ಕೋವಿಡ್ ಹಿನ್ನೆಲೆಯಲ್ಲಿ ಆ. 3ರಿಂದ 5 ರವರೆಗೆ ಎಲ್ಲ ನ್ಯಾಯಾಲಯಗಳ ಕಾರ್ಯಕಲಾಪಗಳನ್ನು ರದ್ದು ಮಾಡಲಾಗಿತ್ತು. ಈಗ ಅದನ್ನು ಆ. 8ರವರೆಗೂ ಮುಂದುವರಿಸಲಾಗಿದೆ.</p>.<p>ಜಿಲ್ಲಾ ನ್ಯಾಯಾಲಯದಲ್ಲಿ ಕೆಲಸ ಮಾಡುವ ನಾಲ್ವರು ಸಿಬ್ಬಂದಿಗೂ ಕೋವಿಡ್ ಅಂಟಿಕೊಂಡ ಕಾರಣ, ನ್ಯಾಯಾಲಯದ ಶೀಲ್ಡೌನ್ ಮುಂದುವರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ಕೋವಿಡ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ, ನಗರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ನ್ಯಾಯಾಲಯಗಳ ಕಾರ್ಯಕಲಾಪಗಳನ್ನು ಆ. 8ರವರೆಗೂ ಸ್ಥಗಿತಗೊಳಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಆರ್.ಜೆ. ಸತೀಶ್ ಸಿಂಗ್ ಅವರು ತಿಳಿಸಿದ್ದಾರೆ.</p>.<p>ಈ ಅವಧಿಯಲ್ಲಿ ಯಾವುದೇ ನ್ಯಾಯಾಂಗ ಮತ್ತು ಇತರೆ ನ್ಯಾಯಾಂಗ ಹಾಗೂ ಆಡಳಿತಾತ್ಮಕ ಕೆಲಸ ಕಾರ್ಯಗಳನ್ನು ರದ್ದುಪಡಿಸಲಾಗಿದೆ. ಅದೇ ರೀತಿ ನ್ಯಾಯಾಲಯದಿಂದ ಜುಲೈ 31ರಂದು ಹೊರಡಿಸಿದ ಅಧಿಸೂಚನೆಯನ್ನು ಸಹ ರದ್ದುಪಡಿಲಾಗಿದೆ. ಈ ಅವಧಿಯಲ್ಲಿ ಕೇವಲ ತುರ್ತು ಕಲಾಪಗಳ ಪ್ರಕರಣಗಳನ್ನು ಇ-ಮೇಲ್ ಮಾತ್ರ ಸ್ವೀಕರಿಸಲಾಗುವುದು ಹಾಗೂ ವಿಡಿಯೊ ಸಂದರ್ಶನಗಳ ಮೂಲಕ ಆಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.</p>.<p>ಕೋವಿಡ್ ಹಿನ್ನೆಲೆಯಲ್ಲಿ ಆ. 3ರಿಂದ 5 ರವರೆಗೆ ಎಲ್ಲ ನ್ಯಾಯಾಲಯಗಳ ಕಾರ್ಯಕಲಾಪಗಳನ್ನು ರದ್ದು ಮಾಡಲಾಗಿತ್ತು. ಈಗ ಅದನ್ನು ಆ. 8ರವರೆಗೂ ಮುಂದುವರಿಸಲಾಗಿದೆ.</p>.<p>ಜಿಲ್ಲಾ ನ್ಯಾಯಾಲಯದಲ್ಲಿ ಕೆಲಸ ಮಾಡುವ ನಾಲ್ವರು ಸಿಬ್ಬಂದಿಗೂ ಕೋವಿಡ್ ಅಂಟಿಕೊಂಡ ಕಾರಣ, ನ್ಯಾಯಾಲಯದ ಶೀಲ್ಡೌನ್ ಮುಂದುವರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>