<p><strong>ಕಲಬುರಗಿ:</strong> ನಗರದ ಹುಮನಾಬಾದ್ ರಿಂಗ್ ರಸ್ತೆಯ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಅವರಿಂದ ₹ 3,500 ನಗದು, ಮೊಬೈಲ್ ಫೋನ್ ದರೋಡೆ ಮಾಡಿ ಪರಾರಿಯಾಗಿದ್ದ ಮೂವರಿಗೆ 5ನೇ ಜೆಎಂಎಫ್ಸಿ ನ್ಯಾಯಾಲಯವು ಮೂರು ವರ್ಷ ಜೈಲು ಶಿಕ್ಷೆ ಹಾಗೂ ತಲಾ ₹ 10 ಸಾವಿರ ದಂಡ ವಿಧಿಸಿದೆ.</p>.<p>ಖಲೀಲ್ ಖಾಜಾ ಪಟೇಲ್, ಆಸೀಫ್ ಮೆಹಬೂಬ್ ಸಾಬ್ ಹಾಗೂ ಅವಿನಾಶ ಶುಭಾಷಚಂದ್ರ ಮಾಳಾ ಶಿಕ್ಷೆಗೆ ಗುರಿಯಾದ ಅಪರಾಧಿಗಳು.</p>.<p>2016ರ ಜೂನ್ 3ರಂದು ಹುಮನಾಬಾದ್ ರಿಂಗ್ ರಸ್ತೆ ಸಮೀಪದಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೆಎಂಎಫ್ ಡೇರಿಯ ಉದ್ಯೋಗಿ ಮಾರುತಿ ನರಸಿಂಗರಾವ್ ಅವರನ್ನು ಆಟೊದಲ್ಲಿ ಹಿಂದಿನಿಂದ ಬಂದು ಅಡ್ಡಗಟ್ಟಿದ ಅಪರಾಧಿಗಳು ಅವರ ಬಳಿ ಇದ್ದ ಮೊಬೈಲ್ ಫೋನ್ ಹಾಗೂ ನಗದು ಕಿತ್ತುಕೊಂಡು ಪರಾರಿಯಾಗಿದ್ದರು. ಈ ಕುರಿತು ಸಬರ್ಬನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಘಟನೆ ಸಂದರ್ಭದಲ್ಲಿದ್ದ ಮಾರುತಿ ಜೊತೆಗಿದ್ದ ಅವರ ಸ್ನೇಹಿತರು ಜೂನ್ 5ರಂದು ಅಪರಾಧಿಗಳನ್ನು ಗುರುತಿಸಿದ್ದರು. ಪೊಲೀಸರು ಅಪರಾಧಿಗಳ ಬಳಿ ಇದ್ದ ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದರು.</p>.<p>ಗ್ರಾಮೀಣ ಠಾಣೆಯ ಪಿಐ ವಾಜೀದ್ ಪಟೇಲ್, ಪಿಎಸ್ಐ ಉದ್ದಂಡಪ್ಪ ಮಣ್ಣೂರಕರ್ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.</p>.<p>ಪ್ರಕರಣದ ವಾದ ವಿವಾದ ಆಲಿಸಿದ ನ್ಯಾಯಾಧೀಶೆ ಲಲಿತಾ ಕುದರಿಮತಿ ಅವರು ಅಪರಾಧಿಗಳಿಗೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದರು. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ಸಂತೋಷಕುಮಾರ್ ಲೋಖಂಡೆ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ನಗರದ ಹುಮನಾಬಾದ್ ರಿಂಗ್ ರಸ್ತೆಯ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಅವರಿಂದ ₹ 3,500 ನಗದು, ಮೊಬೈಲ್ ಫೋನ್ ದರೋಡೆ ಮಾಡಿ ಪರಾರಿಯಾಗಿದ್ದ ಮೂವರಿಗೆ 5ನೇ ಜೆಎಂಎಫ್ಸಿ ನ್ಯಾಯಾಲಯವು ಮೂರು ವರ್ಷ ಜೈಲು ಶಿಕ್ಷೆ ಹಾಗೂ ತಲಾ ₹ 10 ಸಾವಿರ ದಂಡ ವಿಧಿಸಿದೆ.</p>.<p>ಖಲೀಲ್ ಖಾಜಾ ಪಟೇಲ್, ಆಸೀಫ್ ಮೆಹಬೂಬ್ ಸಾಬ್ ಹಾಗೂ ಅವಿನಾಶ ಶುಭಾಷಚಂದ್ರ ಮಾಳಾ ಶಿಕ್ಷೆಗೆ ಗುರಿಯಾದ ಅಪರಾಧಿಗಳು.</p>.<p>2016ರ ಜೂನ್ 3ರಂದು ಹುಮನಾಬಾದ್ ರಿಂಗ್ ರಸ್ತೆ ಸಮೀಪದಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೆಎಂಎಫ್ ಡೇರಿಯ ಉದ್ಯೋಗಿ ಮಾರುತಿ ನರಸಿಂಗರಾವ್ ಅವರನ್ನು ಆಟೊದಲ್ಲಿ ಹಿಂದಿನಿಂದ ಬಂದು ಅಡ್ಡಗಟ್ಟಿದ ಅಪರಾಧಿಗಳು ಅವರ ಬಳಿ ಇದ್ದ ಮೊಬೈಲ್ ಫೋನ್ ಹಾಗೂ ನಗದು ಕಿತ್ತುಕೊಂಡು ಪರಾರಿಯಾಗಿದ್ದರು. ಈ ಕುರಿತು ಸಬರ್ಬನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಘಟನೆ ಸಂದರ್ಭದಲ್ಲಿದ್ದ ಮಾರುತಿ ಜೊತೆಗಿದ್ದ ಅವರ ಸ್ನೇಹಿತರು ಜೂನ್ 5ರಂದು ಅಪರಾಧಿಗಳನ್ನು ಗುರುತಿಸಿದ್ದರು. ಪೊಲೀಸರು ಅಪರಾಧಿಗಳ ಬಳಿ ಇದ್ದ ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದರು.</p>.<p>ಗ್ರಾಮೀಣ ಠಾಣೆಯ ಪಿಐ ವಾಜೀದ್ ಪಟೇಲ್, ಪಿಎಸ್ಐ ಉದ್ದಂಡಪ್ಪ ಮಣ್ಣೂರಕರ್ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.</p>.<p>ಪ್ರಕರಣದ ವಾದ ವಿವಾದ ಆಲಿಸಿದ ನ್ಯಾಯಾಧೀಶೆ ಲಲಿತಾ ಕುದರಿಮತಿ ಅವರು ಅಪರಾಧಿಗಳಿಗೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದರು. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ಸಂತೋಷಕುಮಾರ್ ಲೋಖಂಡೆ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>