<p><strong>ಕಲಬುರ್ಗಿ: </strong>ಮನೆಯವರು ಕೆಲಸಕ್ಕೆಂದು ಕೀಲಿ ಹಾಕಿಕೊಂಡು ಹೋಗಿದ್ದ ವೇಳೆ ಮನೆಯ ಕೀಲಿ ಮುರಿದು ₹ 1.03 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ ಆರೋಪ ಸಾಬೀತಾಗಿದ್ದರಿಂದ ಇಲ್ಲಿನ ಐದನೇ ಹೆಚ್ಚುವರಿ ಜೆಎಂಎಫ್ ನ್ಯಾಯಾಲಯ 3 ವರ್ಷ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹ 5 ಸಾವಿರ ದಂಡ ವಿಧಿಸಿದೆ.</p>.<p>ಆಜಾದಪುರ ರಸ್ತೆಯ ಮಹ್ಮದ್ ಅಲ್ಮಾಸ್ ಅಲಿಯಾಸ್ ಮುರಗಿ ಚಾಂದ್ ಶಿಕ್ಷೆಗೊಳಗಾದವನು. 28 ಮೇ 2017ರಂದು ಸೈಯದ್ ಚಿಂಚೋಳಿ ಕ್ರಾಸ್ ಸಮೀಪದ ಸಾಗರ ಸಿಟಿಯಲ್ಲಿರುವ ಉದಯಕುಮಾರ ಮಠಪತಿ ಅವರ ಮನೆಗೆ ನುಗ್ಗಿದ್ದ ಮಹ್ಮದ್ ಅಲ್ಮಾಸ್ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದ. ಈ ಬಗ್ಗೆ ದೂರು ದಾಖಲಿಸಿಕೊಂಡಿದ್ದ ಗ್ರಾಮೀಣ ಠಾಣೆಯ ಅಂದಿನ ಪೊಲೀಸ್ ಇನ್ಸ್ಪೆಕ್ಟರ್ ವಾಜಿದ್ ಪಟೇಲ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.</p>.<p>ಪ್ರಕರಣದ ವಾದ ವಿವಾದ ಆಲಿಸಿದ ನ್ಯಾಯಾಧೀಶರಾದ ಪಂಕಜಾ ಕೊಣ್ಣೂರ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದರು. ಸರ್ಕಾರದ ಪರವಾಗಿ 5ನೇ ಸಹಾಯಕ ಸರ್ಕಾರಿ ಅಭಿಯೋಜಕಿ ಛಾಯಾದೇವಿ ಪಾಟೀಲ ವಾದ ಮಂಡಿಸಿದ್ದರು.</p>.<p><strong>ಮಹಿಳೆಯ ಸಾವಿಗೆ ಕಾರಣವಾಗಿದ್ದ ಚಾಲಕನಿಗೆ ಜೈಲು</strong></p>.<p><strong>ಕಲಬುರ್ಗಿ:</strong> ಪಿಕ್ ಅಪ್ ಜೀಪ್ ಅನ್ನು ನಿರ್ಲಕ್ಷ್ಯದಿಂದ ಚಲಾಯಿಸಿ ಮಹಿಳೆಯೊಬ್ಬರ ಸಾವಿಗೆ ಕಾರಣನಾಗಿದ್ದ ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಯಲೋರಿ ಗ್ರಾಮದ ಪ್ರೇಮನಾಥ ಗಂಜಿಟೆ ಎಂಬಾತನಿಗೆ ಇಲ್ಲಿನ ಐದನೇ ಹೆಚ್ಚುವರಿ ಜೆಎಂಎಫ್ ನ್ಯಾಯಾಲಯ ಆರು ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹ 4,700 ದಂಡ ವಿಧಿಸಿ ಆದೇಶಿಸಿದೆ.</p>.<p>5 ಡಿಸೆಂಬರ್ 2014ರಲ್ಲಿ ಪ್ರೇಮನಾಥ ಹುಮನಾಬಾದ್ ಕಡೆಯಿಂದ ನಗರಕ್ಕೆ ಬರುವಾಗ ರಸ್ತೆ ಬದಿ ನಿಂತಿದ್ದ ಹೈದರಾಬಾದ್ ನಿವಾಸಿ ಅಲಿಯಾ ಬೇಗಂ ರಹಿಮೊದ್ದೀನ್ ಎಂಬುವವರಿಗೆ ಡಿಕ್ಕಿ ಹೊಡೆಸಿದ್ದ. ಅಲಿಯಾ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಗ್ರಾಮೀಣ ಠಾಣೆಯ ಅಂದಿನ ಪೊಲೀಸ್ ಇನ್ಸ್ಪೆಕ್ಟರ್ ಡಿ.ಜಿ.ರಾಜಣ್ಣ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.</p>.<p>ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಪಂಕಜಾ ಕೊಣ್ಣೂರ ಅವರು ಮೋಟಾರು ವಾಹನ ಕಾಯ್ದೆಯಡಿ ಆರೋಪ ಸಾಬೀತಾಗಿದ್ದರಿಂದ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದರು. ದಂಡ ಪಾವತಿಸಲು ವಿಫಲನಾದಲ್ಲಿ ಹೆಚ್ಚುವರಿಯಾಗಿ 1 ತಿಂಗಳು 10 ಜನ ಕಾರಾಗೃಹ ಶಿಕ್ಷೆಯನ್ನು ವಿಧಿಸಿದ್ದಾರೆ.</p>.<p>ಸರ್ಕಾರದ ಪರವಾಗಿ5ನೇ ಸಹಾಯಕ ಸರ್ಕಾರಿ ಅಭಿಯೋಜಕಿ ಛಾಯಾದೇವಿ ಪಾಟೀಲ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ಮನೆಯವರು ಕೆಲಸಕ್ಕೆಂದು ಕೀಲಿ ಹಾಕಿಕೊಂಡು ಹೋಗಿದ್ದ ವೇಳೆ ಮನೆಯ ಕೀಲಿ ಮುರಿದು ₹ 1.03 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ ಆರೋಪ ಸಾಬೀತಾಗಿದ್ದರಿಂದ ಇಲ್ಲಿನ ಐದನೇ ಹೆಚ್ಚುವರಿ ಜೆಎಂಎಫ್ ನ್ಯಾಯಾಲಯ 3 ವರ್ಷ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹ 5 ಸಾವಿರ ದಂಡ ವಿಧಿಸಿದೆ.</p>.<p>ಆಜಾದಪುರ ರಸ್ತೆಯ ಮಹ್ಮದ್ ಅಲ್ಮಾಸ್ ಅಲಿಯಾಸ್ ಮುರಗಿ ಚಾಂದ್ ಶಿಕ್ಷೆಗೊಳಗಾದವನು. 28 ಮೇ 2017ರಂದು ಸೈಯದ್ ಚಿಂಚೋಳಿ ಕ್ರಾಸ್ ಸಮೀಪದ ಸಾಗರ ಸಿಟಿಯಲ್ಲಿರುವ ಉದಯಕುಮಾರ ಮಠಪತಿ ಅವರ ಮನೆಗೆ ನುಗ್ಗಿದ್ದ ಮಹ್ಮದ್ ಅಲ್ಮಾಸ್ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದ. ಈ ಬಗ್ಗೆ ದೂರು ದಾಖಲಿಸಿಕೊಂಡಿದ್ದ ಗ್ರಾಮೀಣ ಠಾಣೆಯ ಅಂದಿನ ಪೊಲೀಸ್ ಇನ್ಸ್ಪೆಕ್ಟರ್ ವಾಜಿದ್ ಪಟೇಲ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.</p>.<p>ಪ್ರಕರಣದ ವಾದ ವಿವಾದ ಆಲಿಸಿದ ನ್ಯಾಯಾಧೀಶರಾದ ಪಂಕಜಾ ಕೊಣ್ಣೂರ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದರು. ಸರ್ಕಾರದ ಪರವಾಗಿ 5ನೇ ಸಹಾಯಕ ಸರ್ಕಾರಿ ಅಭಿಯೋಜಕಿ ಛಾಯಾದೇವಿ ಪಾಟೀಲ ವಾದ ಮಂಡಿಸಿದ್ದರು.</p>.<p><strong>ಮಹಿಳೆಯ ಸಾವಿಗೆ ಕಾರಣವಾಗಿದ್ದ ಚಾಲಕನಿಗೆ ಜೈಲು</strong></p>.<p><strong>ಕಲಬುರ್ಗಿ:</strong> ಪಿಕ್ ಅಪ್ ಜೀಪ್ ಅನ್ನು ನಿರ್ಲಕ್ಷ್ಯದಿಂದ ಚಲಾಯಿಸಿ ಮಹಿಳೆಯೊಬ್ಬರ ಸಾವಿಗೆ ಕಾರಣನಾಗಿದ್ದ ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಯಲೋರಿ ಗ್ರಾಮದ ಪ್ರೇಮನಾಥ ಗಂಜಿಟೆ ಎಂಬಾತನಿಗೆ ಇಲ್ಲಿನ ಐದನೇ ಹೆಚ್ಚುವರಿ ಜೆಎಂಎಫ್ ನ್ಯಾಯಾಲಯ ಆರು ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹ 4,700 ದಂಡ ವಿಧಿಸಿ ಆದೇಶಿಸಿದೆ.</p>.<p>5 ಡಿಸೆಂಬರ್ 2014ರಲ್ಲಿ ಪ್ರೇಮನಾಥ ಹುಮನಾಬಾದ್ ಕಡೆಯಿಂದ ನಗರಕ್ಕೆ ಬರುವಾಗ ರಸ್ತೆ ಬದಿ ನಿಂತಿದ್ದ ಹೈದರಾಬಾದ್ ನಿವಾಸಿ ಅಲಿಯಾ ಬೇಗಂ ರಹಿಮೊದ್ದೀನ್ ಎಂಬುವವರಿಗೆ ಡಿಕ್ಕಿ ಹೊಡೆಸಿದ್ದ. ಅಲಿಯಾ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಗ್ರಾಮೀಣ ಠಾಣೆಯ ಅಂದಿನ ಪೊಲೀಸ್ ಇನ್ಸ್ಪೆಕ್ಟರ್ ಡಿ.ಜಿ.ರಾಜಣ್ಣ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.</p>.<p>ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಪಂಕಜಾ ಕೊಣ್ಣೂರ ಅವರು ಮೋಟಾರು ವಾಹನ ಕಾಯ್ದೆಯಡಿ ಆರೋಪ ಸಾಬೀತಾಗಿದ್ದರಿಂದ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದರು. ದಂಡ ಪಾವತಿಸಲು ವಿಫಲನಾದಲ್ಲಿ ಹೆಚ್ಚುವರಿಯಾಗಿ 1 ತಿಂಗಳು 10 ಜನ ಕಾರಾಗೃಹ ಶಿಕ್ಷೆಯನ್ನು ವಿಧಿಸಿದ್ದಾರೆ.</p>.<p>ಸರ್ಕಾರದ ಪರವಾಗಿ5ನೇ ಸಹಾಯಕ ಸರ್ಕಾರಿ ಅಭಿಯೋಜಕಿ ಛಾಯಾದೇವಿ ಪಾಟೀಲ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>