2017ರ ಸೆಪ್ಟೆಂಬರ್ 24ರಂದು ಕೈಗಾರಿಕಾ ಪ್ರದೇಶದ ಪ್ಲಾಸ್ಟಿಕ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕೂಲಿಕಾರರೊಬ್ಬರ ಮಗಳು ಬುತ್ತಿ ಕೊಡಲು ಬಂದಿದ್ದಳು. ಈ ಸಂದರ್ಭದಲ್ಲಿ ತನ್ನ ತಂದೆಯ ಬಗ್ಗೆ ವಿಚಾರಿಸಿದಾಗ ಗಣಪತಿ, ನಿಮ್ಮ ತಂದೆ ಹೊರಗಡೆ ಹೋಗಿದ್ದಾರೆ. ಬರುತ್ತಾರೆ ಎಂದು ಹೇಳಿ ಬಾಲಕಿಯನ್ನು ಒಳಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಗ್ರಾಮೀಣ ಠಾಣೆಯ ಅಂದಿನ ಪೊಲೀಸ್ ಇನ್ಸ್ಪೆಕ್ಟರ್ ಎ. ವಾಜಿದ್ ಪಟೇಲ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.