<p><strong>ಕಲಬುರ್ಗಿ:</strong> ರಾಜ್ಯ ಸರ್ಕಾರ 14 ದಿನಗಳ ಲಾಕ್ ಡೌನ್ ಘೋಷಿಸಿದ ಬೆನ್ನಲ್ಲೇ ಪೊಲೀಸರು ರಸ್ತೆಗಿಳಿದಿದ್ದು, ವಾಹನಗಳಲ್ಲಿ ಬಂದವರು ಸೂಕ್ತ ಸಮಜಾಯಿಷಿ ನೀಡದಿದ್ದಲ್ಲಿ ವಾಹನಗಳನ್ನು ವಶಕ್ಕೆ ಪಡೆಯುತ್ತಿದ್ದಾರೆ.</p>.<p>ರೈಲು ನಿಲ್ದಾಣ, ಕೇಂದ್ರ ಬಸ್ ನಿಲ್ದಾಣ, ಸರ್ದಾರ್ ವಲ್ಲಭಭಾಯಿ ವೃತ್ತ, ಜಗತ್ ವೃತ್ತ ಹಾಗೂ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿ ನಾಕಾ ಬಂದಿ ಮಾಡಲಾಗಿದೆ.</p>.<p>10 ಗಂಟೆಯ ಬಳಿಕ ಎಲ್ಲ ಅಂಗಡಿಗಳನ್ನು ಬಂದ್ ಮಾಡಿಸಲಾಗಿದೆ.</p>.<p><strong>ಟಿಕೆಟ್ ತೋರಿಸಿದರೂ ವಾಹನ ಜಪ್ತಿ:</strong> ರೈಲಿನ ಮೂಲಕ ಬಂದು ಬೈಕ್ ನಲ್ಲಿ ಮನೆಗೆ ತೆರಳುವಾಗ ತಡೆದ ಪೊಲೀಸರು ಬೈಕ್ ಜಪ್ತಿ ಮಾಡಿದ್ದಾರೆ. ಟಿಕೆಟ್ ತೋರಿಸಿದರೆ ವಾಹನ ಬಿಡಬೇಕು ಎಂದು ಸರ್ಕಾರ ಸೂಚಿಸಿದೆ. ಆದರೂ ಬಿಡಲಿಲ್ಲ ಎಂದು ತಾರಫೈಲ್ ಬಡಾವಣೆಯ ಉದಯ್ ಬೇಸರ ವ್ಯಕ್ತಪಡಿಸಿದರು.</p>.<p>ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳ ಸಹಾಯಕರು ರಸ್ತೆಯಲ್ಲಿ ಬಂದಾಗಲೂ ಅವರಿಗೆ ಆಸ್ಪತ್ರೆಯಿಂದ ನೀಡಲಾದ ಗುರುತಿನ ಚೀಟಿ ತೋರಿಸುವಂತೆ ಪೊಲೀಸರು ತಾಕೀತು ಮಾಡುತ್ತಿದ್ದಾರೆ.</p>.<p>'ಕಠಿಣ ಲಾಕ್ ಡೌನ್ ಜಾರಿಗೊಳಿಸಲು ಪೊಲೀಸ್ ಮಹಾನಿರ್ದೇಶಕರು ಸೂಚಿಸಿದ್ದಾರೆ. ಹಾಗಾಗಿ, ಸೂಕ್ತ ದಾಖಲೆ ತೋರಿಸಲು ವಿಫಲರಾದವರನ್ನು ತಡೆದು ವಾಹನ ಜಪ್ತಿ ಮಾಡುತ್ತಿದ್ದೇವೆ' ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.</p>.<p>ಜಿಲ್ಲಾ ಗಡಿಗಳನ್ನು ಸಂಪರ್ಕಿಸುವ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಲಾಗಿದ್ದು, ಆಂಬುಲೆನ್ಸ್, ತುರ್ತು ಕಾರ್ಯನಿರ್ವಹಿಸುವ ಇಲಾಖೆಯ ಸಿಬ್ಬಂದಿಗೆ ಮಾತ್ರ ಜಿಲ್ಲೆಯ ಒಳಗೆ ಬರಲು ಅವಕಾಶ ನೀಡಲಾಗುತ್ತಿದೆ.</p>.<p>ಆಳಂದ, ಅಫಜಲಪುರ, ಜೇವರ್ಗಿ, ಸೇಡಂ, ಚಿಂಚೋಳಿ, ಚಿತ್ತಾಪುರ ತಾಲ್ಲೂಕಿನ ವಾಡಿ ಬಳಿ ಅಂತರ್ ಜಿಲ್ಲಾ ಗಡಿಗಳನ್ನು ಆರಂಭಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ರಾಜ್ಯ ಸರ್ಕಾರ 14 ದಿನಗಳ ಲಾಕ್ ಡೌನ್ ಘೋಷಿಸಿದ ಬೆನ್ನಲ್ಲೇ ಪೊಲೀಸರು ರಸ್ತೆಗಿಳಿದಿದ್ದು, ವಾಹನಗಳಲ್ಲಿ ಬಂದವರು ಸೂಕ್ತ ಸಮಜಾಯಿಷಿ ನೀಡದಿದ್ದಲ್ಲಿ ವಾಹನಗಳನ್ನು ವಶಕ್ಕೆ ಪಡೆಯುತ್ತಿದ್ದಾರೆ.</p>.<p>ರೈಲು ನಿಲ್ದಾಣ, ಕೇಂದ್ರ ಬಸ್ ನಿಲ್ದಾಣ, ಸರ್ದಾರ್ ವಲ್ಲಭಭಾಯಿ ವೃತ್ತ, ಜಗತ್ ವೃತ್ತ ಹಾಗೂ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿ ನಾಕಾ ಬಂದಿ ಮಾಡಲಾಗಿದೆ.</p>.<p>10 ಗಂಟೆಯ ಬಳಿಕ ಎಲ್ಲ ಅಂಗಡಿಗಳನ್ನು ಬಂದ್ ಮಾಡಿಸಲಾಗಿದೆ.</p>.<p><strong>ಟಿಕೆಟ್ ತೋರಿಸಿದರೂ ವಾಹನ ಜಪ್ತಿ:</strong> ರೈಲಿನ ಮೂಲಕ ಬಂದು ಬೈಕ್ ನಲ್ಲಿ ಮನೆಗೆ ತೆರಳುವಾಗ ತಡೆದ ಪೊಲೀಸರು ಬೈಕ್ ಜಪ್ತಿ ಮಾಡಿದ್ದಾರೆ. ಟಿಕೆಟ್ ತೋರಿಸಿದರೆ ವಾಹನ ಬಿಡಬೇಕು ಎಂದು ಸರ್ಕಾರ ಸೂಚಿಸಿದೆ. ಆದರೂ ಬಿಡಲಿಲ್ಲ ಎಂದು ತಾರಫೈಲ್ ಬಡಾವಣೆಯ ಉದಯ್ ಬೇಸರ ವ್ಯಕ್ತಪಡಿಸಿದರು.</p>.<p>ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳ ಸಹಾಯಕರು ರಸ್ತೆಯಲ್ಲಿ ಬಂದಾಗಲೂ ಅವರಿಗೆ ಆಸ್ಪತ್ರೆಯಿಂದ ನೀಡಲಾದ ಗುರುತಿನ ಚೀಟಿ ತೋರಿಸುವಂತೆ ಪೊಲೀಸರು ತಾಕೀತು ಮಾಡುತ್ತಿದ್ದಾರೆ.</p>.<p>'ಕಠಿಣ ಲಾಕ್ ಡೌನ್ ಜಾರಿಗೊಳಿಸಲು ಪೊಲೀಸ್ ಮಹಾನಿರ್ದೇಶಕರು ಸೂಚಿಸಿದ್ದಾರೆ. ಹಾಗಾಗಿ, ಸೂಕ್ತ ದಾಖಲೆ ತೋರಿಸಲು ವಿಫಲರಾದವರನ್ನು ತಡೆದು ವಾಹನ ಜಪ್ತಿ ಮಾಡುತ್ತಿದ್ದೇವೆ' ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.</p>.<p>ಜಿಲ್ಲಾ ಗಡಿಗಳನ್ನು ಸಂಪರ್ಕಿಸುವ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಲಾಗಿದ್ದು, ಆಂಬುಲೆನ್ಸ್, ತುರ್ತು ಕಾರ್ಯನಿರ್ವಹಿಸುವ ಇಲಾಖೆಯ ಸಿಬ್ಬಂದಿಗೆ ಮಾತ್ರ ಜಿಲ್ಲೆಯ ಒಳಗೆ ಬರಲು ಅವಕಾಶ ನೀಡಲಾಗುತ್ತಿದೆ.</p>.<p>ಆಳಂದ, ಅಫಜಲಪುರ, ಜೇವರ್ಗಿ, ಸೇಡಂ, ಚಿಂಚೋಳಿ, ಚಿತ್ತಾಪುರ ತಾಲ್ಲೂಕಿನ ವಾಡಿ ಬಳಿ ಅಂತರ್ ಜಿಲ್ಲಾ ಗಡಿಗಳನ್ನು ಆರಂಭಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>