ಈ ಸಂದರ್ಭದಲ್ಲಿ ಮಾತನಾಡಿದ ಸ್ವಾಮೀಜಿ, ಕೋವಿಡ್ ಲಸಿಕೆಯನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಇದರಿಂದ ರೋಗ ಪ್ರತಿರೋಧಕಶಕ್ತಿ ಹೆಚ್ಚಲಿದೆ. ನಮ್ಮಲ್ಲಿ ಆತ್ಮಸ್ಥೈರ್ಯ ಮೂಡಲಿದೆ. ಸಾರ್ವಜನಿಕರು ಸಹ ಇಂತಹ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರ ಜಾರಿಗೆಗೊಳಿಸಿದ ಲಾಕ್ಡೌನ್ ನಿಯಮ ಪಾಲಿಸಬೇಕು ಹಾಗೂ ಆರೋಗ್ಯ ಇಲಾಖೆಯು ಸೂಚಿಸಿದ ಅಗತ್ಯ ಕೋವಿಡ್ ಸುರಕ್ಷತಾ ಕ್ರಮಗಳು ಕಟ್ಟುನಿಟ್ಟಾಗಿ ಪಾಲಿಸಲು ಕರೆ ನೀಡಿದರು.