‘ಕೋವಿಡ್ ಕೇರ್ ಸೆಂಟರ್ ಆರಂಭಿಸುವ ಕುರಿತಂತೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಜೊತೆ ಮಾತನಾಡಿದ್ದು, ಕಾರ್ಮಿಕ ಇಲಾಖೆಯಿಂದಲೇ ಆಸ್ಪತ್ರೆ ದುರಸ್ತಿ ಮಾಡಿಸಲಾಗುವುದು. ವೈದ್ಯ ಸಿಬ್ಬಂದಿ ಸೇವೆ ಜೊತೆಗೆ ಔಷಧಿಗಳನ್ನು ಸಹ ನೀಡುವುದಾಗಿ ಅವರು ತಿಳಿಸಿದ್ದಾರೆ. ಹೀಗಾಗಿ ಪ್ಲೋರಿಂಗ್ ದುರಸ್ತಿ, ವಿದ್ಯುದೀಕರಣ, ಸುಣ್ಣ–ಬಣ್ಣ, ಬೋರ್ವೆಲ್ ರೀಚಾರ್ಜ್ ಸೇರಿದಂತೆ ಸ್ವಚ್ಛತಾ ಕಾರ್ಯವನ್ನು ತಕ್ಷಣ ಕೈಗೊಳ್ಳಬೇಕು’ ಎಂದು ಲೋಕೋಪಯೋಗಿ ಇಲಾಖೆಯ ಎಇಇ ಅಣ್ಣೆಪ್ಪ ಕುದರಿ ಅವರಿಗೆ ಸಚಿವರು ನಿರ್ದೇಶನ ನೀಡಿದರು.