‘ವಿಶೇಷವಾಗಿ, ಆಮ್ಲಜನಕ ಸರಬರಾಜು ಮಾಡಲು ಜಿಲ್ಲೆಗಾಗಿಯೇ ಒಂದು ಪ್ರತ್ಯೇಕ ವಾಹನ ಪಡೆಯಲು ಏಜೆನ್ಸಿ ಜತೆಗೆ ಮಾತನಾಡಿದ್ದೇನೆ. ಬುಧವಾರವೇ ವಾಹನ ಇಲ್ಲಿಗೆ ಬರಲಿದೆ. ಆಮ್ಲಜನಕ ತುಂಬಿದ ಈ ಟ್ಯಾಂಕರ್ ಇಡೀ ದಿನ ಇಲ್ಲೇ ಇರಲಿದೆ. ಖಾಲಿ ಆದ ತಕ್ಷಣ ಮತ್ತೆ ತುಂಬಿಕೊಂಡು ಬರಲಿದೆ. ಅಗತ್ಯದಷ್ಟು ಆಮ್ಲಜನಕ ಪೂರೈಸಲು ಬಳ್ಳಾರಿಯ ಜಿಂದಾಲ್ ಕಂಪನಿ ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ’ ಎಂದರು.