<p><strong>ಆಳಂದ: </strong>ತಹಶೀಲ್ದಾರ್ ಕಚೇರಿಯಲ್ಲಿನ ಉಪ ತಹಶೀಲ್ದಾರ್ (ಗ್ರೇಡ್–2 ತಹಶೀಲ್ದಾರ್) ಒಬ್ಬರಿಗೆ ಶನಿವಾರ ಕೋವಿಡ್ 19 ಸೋಂಕು ಪತ್ತೆಯಾಗಿದೆ.</p>.<p>ಇವರು ಪ್ರಭಾರ ತಹಶೀಲ್ದಾರ್ ಆಗಿ ಕಳೆದ ವಾರದಿಂದ ಕಾರ್ಯ ನಿರ್ವಹಿಸುತ್ತಿದ್ದರು. ಇವರ ನೇರ ಸಂಪರ್ಕಕ್ಕೆ ಹಲವು ಜನ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.</p>.<p>ತಹಶೀಲ್ದಾರ್ ಕಚೇರಿಗೆ ಶನಿವಾರ ಪುರಸಭೆ ಸಿಬ್ಬಂದಿಯಿಂದ ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ. ಎರಡು ದಿನ ರಜೆ ದಿನ ಇರುವ ಕಾರಣ ತಹಶೀಲ್ದಾರ್ ಕಚೇರಿಯನ್ನು ಸೀಲ್ಡೌನ್ ಮಾಡಲಾಗಿದೆ. ಸಹಾಯವಾಣಿ ಸೇರಿದಂತೆ ತಹಶೀಲ್ದಾರ್ ಕಚೇರಿ ಸಿಬ್ಬಂದಿ ಸಹ ಶನಿವಾರ ಕಂಡುಬರಲಿಲ್ಲ.</p>.<p>ಸರ್ಕಾರಿ ನೌಕರರ ಸಂಘದವರು ತಹಶೀಲ್ದಾರ್ ಕಚೇರಿಗೆ ಶುಕ್ರವಾರ ಆಗಮಿಸಿ ಮನವಿ ಸಲ್ಲಿಸಿದ್ದರು. ಹೀಗಾಗಿ ನೌಕರರ ಸಂಘದ ಅಧ್ಯಕ್ಷರು ಮತ್ತು ಇತರರು ಹೋಂ ಕ್ವಾರಂಟೈನ್ನಲ್ಲಿ ಉಳಿಯುವಂತಾಗಿದೆ.</p>.<p>ಈಗಾಗಲೇ ಪಟ್ಟಣದ ಹೋಟೆಲ್ ಮಾಲೀಕನೊಬ್ಬನಿಗೆ ಕೋವಿಡ್ ದೃಢಪಟ್ಟ ಬೆನ್ನಲ್ಲೇ ಇವರ ಸಂಪರ್ಕಕ್ಕೆ ಬಂದಿರುವ ತಹಶೀಲ್ದಾರ್ ದಯಾನಂದ ಪಾಟೀಲ ಅವರು ಹೋಂ ಕ್ವಾರಂಟೈನ್ ಮುಗಿಸಿ ಶನಿವಾರ ಕಚೇರಿಗೆ ಹಾಜರಾಗಿದ್ದಾರೆ.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಸಂಜಯ ರೆಡ್ಡಿ ಸಹ ಹೋಂ ಕ್ವಾರಂಟೈನ್ನಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಳಂದ: </strong>ತಹಶೀಲ್ದಾರ್ ಕಚೇರಿಯಲ್ಲಿನ ಉಪ ತಹಶೀಲ್ದಾರ್ (ಗ್ರೇಡ್–2 ತಹಶೀಲ್ದಾರ್) ಒಬ್ಬರಿಗೆ ಶನಿವಾರ ಕೋವಿಡ್ 19 ಸೋಂಕು ಪತ್ತೆಯಾಗಿದೆ.</p>.<p>ಇವರು ಪ್ರಭಾರ ತಹಶೀಲ್ದಾರ್ ಆಗಿ ಕಳೆದ ವಾರದಿಂದ ಕಾರ್ಯ ನಿರ್ವಹಿಸುತ್ತಿದ್ದರು. ಇವರ ನೇರ ಸಂಪರ್ಕಕ್ಕೆ ಹಲವು ಜನ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.</p>.<p>ತಹಶೀಲ್ದಾರ್ ಕಚೇರಿಗೆ ಶನಿವಾರ ಪುರಸಭೆ ಸಿಬ್ಬಂದಿಯಿಂದ ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ. ಎರಡು ದಿನ ರಜೆ ದಿನ ಇರುವ ಕಾರಣ ತಹಶೀಲ್ದಾರ್ ಕಚೇರಿಯನ್ನು ಸೀಲ್ಡೌನ್ ಮಾಡಲಾಗಿದೆ. ಸಹಾಯವಾಣಿ ಸೇರಿದಂತೆ ತಹಶೀಲ್ದಾರ್ ಕಚೇರಿ ಸಿಬ್ಬಂದಿ ಸಹ ಶನಿವಾರ ಕಂಡುಬರಲಿಲ್ಲ.</p>.<p>ಸರ್ಕಾರಿ ನೌಕರರ ಸಂಘದವರು ತಹಶೀಲ್ದಾರ್ ಕಚೇರಿಗೆ ಶುಕ್ರವಾರ ಆಗಮಿಸಿ ಮನವಿ ಸಲ್ಲಿಸಿದ್ದರು. ಹೀಗಾಗಿ ನೌಕರರ ಸಂಘದ ಅಧ್ಯಕ್ಷರು ಮತ್ತು ಇತರರು ಹೋಂ ಕ್ವಾರಂಟೈನ್ನಲ್ಲಿ ಉಳಿಯುವಂತಾಗಿದೆ.</p>.<p>ಈಗಾಗಲೇ ಪಟ್ಟಣದ ಹೋಟೆಲ್ ಮಾಲೀಕನೊಬ್ಬನಿಗೆ ಕೋವಿಡ್ ದೃಢಪಟ್ಟ ಬೆನ್ನಲ್ಲೇ ಇವರ ಸಂಪರ್ಕಕ್ಕೆ ಬಂದಿರುವ ತಹಶೀಲ್ದಾರ್ ದಯಾನಂದ ಪಾಟೀಲ ಅವರು ಹೋಂ ಕ್ವಾರಂಟೈನ್ ಮುಗಿಸಿ ಶನಿವಾರ ಕಚೇರಿಗೆ ಹಾಜರಾಗಿದ್ದಾರೆ.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಸಂಜಯ ರೆಡ್ಡಿ ಸಹ ಹೋಂ ಕ್ವಾರಂಟೈನ್ನಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>