<p><strong>ಕಲಬುರಗಿ: </strong>ವಾರಾಂತ್ಯ ಕರ್ಫ್ಯೂ ಹೇರಿದ ಕಾರಣ ಶನಿವಾರ ನಗರದ ಪ್ರಮುಖ ರಸ್ತೆ, ವೃತ್ತಗಳಲ್ಲಿ ಜನ ಹಾಗೂ ವಾಹನ ಸಂಚಾರ ತುಂಬ ವಿರಳವಾಗಿದೆ.</p>.<p>ಇಲ್ಲಿನ ಜನನಿಬಿಡ ಪ್ರದೇಶಗಳಾದ ಬಸ್ ನಿಲ್ದಾಣ, ರೈಲು ನಿಲ್ದಾಣ, ಎಪಿಎಂಸಿ, ಎಂ.ಎಸ್.ಕೆ ಮಿಲ್ ಪ್ರದೇಶ, ಶರಣಬಸವೇಶ್ವರ ದೇವಸ್ಥಾನ, ಖಾಜಾ ಬಂದಾ ನವಾಜ್ ದರ್ಗಾ ಸೇರಿದಂತೆ ಬಹುಪಾಲು ಕಡೆ ಪ್ರವೇಶ ನಿರ್ಬಂಧಿಸಲಾಗಿದೆ.</p>.<p>ರಾಮಮಂದಿರ ಸರ್ಕಲ್, ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತ, ಜಗತ್ ಸರ್ಕಲ್, ರಾಷ್ಟ್ರಪತಿ ಚೌಕ, ಮುಸ್ಲಿಂ ಚೌಕ, ಖರ್ಗೆ ಸರ್ಕಲ್, ಲಾಳಗೇರಿ ಕ್ರಾಸ್ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಕೂಡ ವಾಹನಗಳ ಓಡಾಟ ಕಡಿಮೆ ಇದೆ.</p>.<p>ಸೂಪರ್ ಮಾರ್ಕೆಟ್ ನಲ್ಲಿ ಕೆಲವು ವ್ಯಾಪಾರಿಗಳು ಎಂದಿನಂತೆಯೇ ಶನಿವಾರ ನಸುಕಿನಲ್ಲಿ ಕೂಡ ತಮ್ಮ ಹಣ್ಣು, ತರಕಾರಿ ವ್ಯಾಪಾರ ಆರಂಭಿಸಿದರು. ಇದರಿಂದ ಬೆಳಿಗ್ಗೆ 9ರವರೆಗೆ ಗ್ರಾಹಕರ ಸಂಖ್ಯೆ ಹೆಚ್ಚಾಗಿತ್ತು. 10ರ ನಂತರ ಸ್ಥಳಕ್ಕೆ ಬಂದ ಸಂಚಾರ ಪೊಲೀಸರು ಜನರನ್ನು ಚದುರಿಸಿದರು.</p>.<p>ನಗರ ಹಾಗೂ ಗ್ರಾಮೀಣ ಸಾರಿಗೆಯ ಎಲ್ಲ ಬಸ್ಸುಗಳು ನಿಲ್ದಾಣದಲ್ಲೇ ಠಿಕಾಣೆ ಹೂಡಿದವು. ಕೆಲವರು ಬೈಕ್, ಆಟೊ, ಕಾರುಗಳಲ್ಲಿ ಸಂಚರಿಸಿದರು. ವೃತ್ತಗಳಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಆದರೆ ವಾಹನ ತಡೆದು ತಪಾಸಣೆ ಮಾಡಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ: </strong>ವಾರಾಂತ್ಯ ಕರ್ಫ್ಯೂ ಹೇರಿದ ಕಾರಣ ಶನಿವಾರ ನಗರದ ಪ್ರಮುಖ ರಸ್ತೆ, ವೃತ್ತಗಳಲ್ಲಿ ಜನ ಹಾಗೂ ವಾಹನ ಸಂಚಾರ ತುಂಬ ವಿರಳವಾಗಿದೆ.</p>.<p>ಇಲ್ಲಿನ ಜನನಿಬಿಡ ಪ್ರದೇಶಗಳಾದ ಬಸ್ ನಿಲ್ದಾಣ, ರೈಲು ನಿಲ್ದಾಣ, ಎಪಿಎಂಸಿ, ಎಂ.ಎಸ್.ಕೆ ಮಿಲ್ ಪ್ರದೇಶ, ಶರಣಬಸವೇಶ್ವರ ದೇವಸ್ಥಾನ, ಖಾಜಾ ಬಂದಾ ನವಾಜ್ ದರ್ಗಾ ಸೇರಿದಂತೆ ಬಹುಪಾಲು ಕಡೆ ಪ್ರವೇಶ ನಿರ್ಬಂಧಿಸಲಾಗಿದೆ.</p>.<p>ರಾಮಮಂದಿರ ಸರ್ಕಲ್, ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತ, ಜಗತ್ ಸರ್ಕಲ್, ರಾಷ್ಟ್ರಪತಿ ಚೌಕ, ಮುಸ್ಲಿಂ ಚೌಕ, ಖರ್ಗೆ ಸರ್ಕಲ್, ಲಾಳಗೇರಿ ಕ್ರಾಸ್ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಕೂಡ ವಾಹನಗಳ ಓಡಾಟ ಕಡಿಮೆ ಇದೆ.</p>.<p>ಸೂಪರ್ ಮಾರ್ಕೆಟ್ ನಲ್ಲಿ ಕೆಲವು ವ್ಯಾಪಾರಿಗಳು ಎಂದಿನಂತೆಯೇ ಶನಿವಾರ ನಸುಕಿನಲ್ಲಿ ಕೂಡ ತಮ್ಮ ಹಣ್ಣು, ತರಕಾರಿ ವ್ಯಾಪಾರ ಆರಂಭಿಸಿದರು. ಇದರಿಂದ ಬೆಳಿಗ್ಗೆ 9ರವರೆಗೆ ಗ್ರಾಹಕರ ಸಂಖ್ಯೆ ಹೆಚ್ಚಾಗಿತ್ತು. 10ರ ನಂತರ ಸ್ಥಳಕ್ಕೆ ಬಂದ ಸಂಚಾರ ಪೊಲೀಸರು ಜನರನ್ನು ಚದುರಿಸಿದರು.</p>.<p>ನಗರ ಹಾಗೂ ಗ್ರಾಮೀಣ ಸಾರಿಗೆಯ ಎಲ್ಲ ಬಸ್ಸುಗಳು ನಿಲ್ದಾಣದಲ್ಲೇ ಠಿಕಾಣೆ ಹೂಡಿದವು. ಕೆಲವರು ಬೈಕ್, ಆಟೊ, ಕಾರುಗಳಲ್ಲಿ ಸಂಚರಿಸಿದರು. ವೃತ್ತಗಳಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಆದರೆ ವಾಹನ ತಡೆದು ತಪಾಸಣೆ ಮಾಡಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>