ತಾಲ್ಲೂಕಿನ ಮಾಶಾಳ, ಬಳೂರ್ಗಿ ಚೆಕ್ಪೋಸ್ಟ್ ಮೂಲಕ ನಿತ್ಯ ದೇವಲಗಾಣಗಾಪುರ ದತ್ತ ದೇವಸ್ಥಾನಕ್ಕೆ ಯಾತ್ರಿಕರು ವಾಹನಗಳ ಮೂಲಕ ತಂಡೋಪತಂಡವಾಗಿ ಬರುತ್ತಿದ್ದಾರೆ. ಯಾವ ವಾಹನಗಳೂ ಮರಳಿ ಹೋಗುತ್ತಿಲ್ಲ, ಕೆಲ ದಿನಗಳಿಂದ ಮಹಾರಾಷ್ಟ್ರದ ಗಡಿ ಜಿಲ್ಲೆಗಳಿಗೂ ಕಲ್ಯಾಣ ಕರ್ನಾಟಕದ ಬಸ್ ಸಂಚಾರ ಆರಂಭವಾಗಿದ್ದು, ಹೆಚ್ಚು ಜನ ಪ್ರಯಾಣಿಸುತ್ತಿದ್ದಾರೆ. ಹೀಗಾಗಿ ಕೋವಿಡ್ ಹೆಚ್ಚಾಗಿದೆ ಎನ್ನಲಾಗುತ್ತಿದೆ.