<p><strong>ಸೇಡಂ (ಕಲಬುರ್ಗಿ ಜಿಲ್ಲೆ): </strong>ಇಲ್ಲಿನ ತಾಲ್ಲೂಕು ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ನೀಡಲು ಶನಿವಾರ ಚಾಲನೆ ನೀಡಲಾಯಿತು.</p>.<p>ಆಸ್ಪತ್ರೆಯ ಗ್ರೂಪ್ ಡಿ ಸಿಬ್ಬಂದಿ ಸಂತೋಷ ಅವರಿಗೆ ಕೋವಿಡ್ ಮೊದಲ ಲಸಿಕೆ ನೀಡಲಾಯಿತು.</p>.<p>ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ ಮಾತನಾಡಿ, ಕೊರೊನಾ ಹಾವಳಿ ತಡೆಗಟ್ಟಲು ಲಸಿಕೆ ಸಿಗುತ್ತಿರುವುದು ನಮ್ಮೆಲ್ಲರ ಹೆಮ್ಮೆ. ಕೋವಿಡ್ ಬಂದರೂ ಹೆದರುವ ಅವಶ್ಯಕತೆ ಇಲ್ಲ. ಧೈರ್ಯದಿಂದ ಇದ್ದು ಎದುರಿಸಬೇಕು' ಎಂದರು.</p>.<p>ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಗೀತಾ ಶ್ರೀನಿವಾಸರೆಡ್ಡಿ ಪಾಟೀಲ, ವಿವೇಕರೆಡ್ಡಿ, ಶ್ರೀಮಂತ ಆವಂಟಿ, ವಿಜಯಕುಮಾರ್ ಶರ್ಮಾ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ ಇದ್ದರು.</p>.<p><strong>ಅಕ್ಷಯ್ಗೆ ಮೊದಲ ಲಸಿಕೆ<br />ಚಿತ್ತಾಪುರ (ಕಲಬುರ್ಗಿ ಜಿಲ್ಲೆ): </strong>ಇಲ್ಲಿನತಾಲ್ಲೂಕು ಆಸ್ಪತ್ರೆಯಲ್ಲಿ ಶನಿವಾರ ಅಕ್ಷಯ್ ಕುಮಾರ ಎನ್ನುವ ಡಿ ಗ್ರೂಪ್ ನೌಕರರಿಗೆ ಮೊದಲ ಲಸಿಕೆ ನೀಡಲಾಯಿತು.</p>.<p>ಶಾಸಕ ಪ್ರಿಯಾಂಕ್ ಖರ್ಗೆ ಅವರು ಲಸಿಕೆ ನೀಡುವ ವಿಧಾನವನ್ನು ಖುದ್ದು ಪರಿಶೀಲಿಸಿದರು.</p>.<p>ಈ ಸಂದರ್ಭದಲ್ಲಿ ತಿಪ್ಪಣ್ಣಪ್ಪ ಕಮಕನೂರು, ತಾ.ಪಂ ಅಧ್ಯಕ್ಷ ಜಗನರೆಡ್ಡಿ ಪಾಟೀಲ, ತಹಶೀಲ್ದಾರ್ ಉಮಾಕಾಂತ್ ಹಳ್ಳೆ ಹಾಗೂ ವೈದ್ಯಾಧಿಕಾರಿಗಳು ಹಾಜಿರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೇಡಂ (ಕಲಬುರ್ಗಿ ಜಿಲ್ಲೆ): </strong>ಇಲ್ಲಿನ ತಾಲ್ಲೂಕು ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ನೀಡಲು ಶನಿವಾರ ಚಾಲನೆ ನೀಡಲಾಯಿತು.</p>.<p>ಆಸ್ಪತ್ರೆಯ ಗ್ರೂಪ್ ಡಿ ಸಿಬ್ಬಂದಿ ಸಂತೋಷ ಅವರಿಗೆ ಕೋವಿಡ್ ಮೊದಲ ಲಸಿಕೆ ನೀಡಲಾಯಿತು.</p>.<p>ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ ಮಾತನಾಡಿ, ಕೊರೊನಾ ಹಾವಳಿ ತಡೆಗಟ್ಟಲು ಲಸಿಕೆ ಸಿಗುತ್ತಿರುವುದು ನಮ್ಮೆಲ್ಲರ ಹೆಮ್ಮೆ. ಕೋವಿಡ್ ಬಂದರೂ ಹೆದರುವ ಅವಶ್ಯಕತೆ ಇಲ್ಲ. ಧೈರ್ಯದಿಂದ ಇದ್ದು ಎದುರಿಸಬೇಕು' ಎಂದರು.</p>.<p>ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಗೀತಾ ಶ್ರೀನಿವಾಸರೆಡ್ಡಿ ಪಾಟೀಲ, ವಿವೇಕರೆಡ್ಡಿ, ಶ್ರೀಮಂತ ಆವಂಟಿ, ವಿಜಯಕುಮಾರ್ ಶರ್ಮಾ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ ಇದ್ದರು.</p>.<p><strong>ಅಕ್ಷಯ್ಗೆ ಮೊದಲ ಲಸಿಕೆ<br />ಚಿತ್ತಾಪುರ (ಕಲಬುರ್ಗಿ ಜಿಲ್ಲೆ): </strong>ಇಲ್ಲಿನತಾಲ್ಲೂಕು ಆಸ್ಪತ್ರೆಯಲ್ಲಿ ಶನಿವಾರ ಅಕ್ಷಯ್ ಕುಮಾರ ಎನ್ನುವ ಡಿ ಗ್ರೂಪ್ ನೌಕರರಿಗೆ ಮೊದಲ ಲಸಿಕೆ ನೀಡಲಾಯಿತು.</p>.<p>ಶಾಸಕ ಪ್ರಿಯಾಂಕ್ ಖರ್ಗೆ ಅವರು ಲಸಿಕೆ ನೀಡುವ ವಿಧಾನವನ್ನು ಖುದ್ದು ಪರಿಶೀಲಿಸಿದರು.</p>.<p>ಈ ಸಂದರ್ಭದಲ್ಲಿ ತಿಪ್ಪಣ್ಣಪ್ಪ ಕಮಕನೂರು, ತಾ.ಪಂ ಅಧ್ಯಕ್ಷ ಜಗನರೆಡ್ಡಿ ಪಾಟೀಲ, ತಹಶೀಲ್ದಾರ್ ಉಮಾಕಾಂತ್ ಹಳ್ಳೆ ಹಾಗೂ ವೈದ್ಯಾಧಿಕಾರಿಗಳು ಹಾಜಿರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>