‘ರಾಜ್ಯದಲ್ಲಿ 50 ಲಕ್ಷ ಕುಟುಂಬಗಳು ವಸತಿ ರಹಿತವಾಗಿವೆ. ಇವುಗಳಿಗೆ ವಸತಿ ಉದ್ದೇಶಕ್ಕಾಗಿ ಭೂಮಿ ಕಾಯ್ದಿರಿಸದೇ ಸರ್ಕಾರಗಳು ಜನರನ್ನು ಬೀದಿಗೆ ತಳ್ಳಿವೆ. ಬಿಜೆಪಿ ಸರ್ಕಾರ 17 ಲಕ್ಷ ಎಕರೆ ಸರಕಾರಿ ಜಮೀನನ್ನು ಟ್ರಸ್ಟ್, ಮಠ ಮತ್ತು ಪ್ರಭಾವಿ ವ್ಯಕ್ತಿಗಳಿಗೆ ಪರಭಾರೆ ಮಾಡಲು ಹೊರಟಿದೆ. ಕೂಡಲೇ ಸರ್ಕಾರ ನಿವೇಶನಕ್ಕೆ ಅಗತ್ಯವಿರುವ ಐದು ಲಕ್ಷ ಎಕರೆ ಸರ್ಕಾರಿ ಭೂಮಿಯನ್ನು ರಾಜ್ಯದಾದ್ಯಂತ ಗುರುತಿಸಿ ನಿವೇಶನ ನೀಡಬೇಕು’ ಎಂದು ಅವರು ಒತ್ತಾಯಿಸಿದರು.