ಕೆಇಎ ನೇಮಕಾತಿ ಪರೀಕ್ಷಾ ಅಕ್ರಮದ ಬಳಿಕ ತಲೆ ಮರೆಸಿಕೊಂಡಿದ್ದ ಆರ್.ಡಿ. ಪಾಟೀಲ, ನಗರದ ಅಪಾರ್ಟ್ಮೆಂಟ್ ಒಂದರಲ್ಲಿ ವಾಸವಾಗಿದ್ದ. ನವೆಂಬರ್ 6ರಂದು ಬೆಳಿಗ್ಗೆ ಈ ಬಗ್ಗೆ ಮಾಹಿತಿ ಲಭಿಸಿದರೂ ಬಂಧಿಸಲು ತಕ್ಷಣ ತೆರಳದೇ ವಿಳಂಬ ಮಾಡಿದ್ದ ಆರೋಪ ಪಂಡಿತ ಅವರ ಮೇಲೆ ಕೇಳಿಬಂದಿತ್ತು. ಈ ಕಾರಣಕ್ಕಾಗಿಯೇ ಅವರನ್ನು ಅಮಾನತು ಮಾಡಲಾಗಿದೆ ಎನ್ನಲಾಗುತ್ತಿದೆ.