ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ. ನೀಲಾ, ‘ರಾಜ್ಯದ ಶಾಲಾ–ಕಾಲೇಜುಗಳಲ್ಲಿ ಉಂಟಾದ
ಹಿಜಾಬ್ ಹಾಗೂ ಕೇಸರಿ ಶಾಲು ವಿವಾದದ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ನ ತ್ರಿ ಸದಸ್ಯ ಪೀಠವು ಮಧ್ಯಂತರ ಆದೇಶವನ್ನು ಹೊರಡಿಸಿ, ತರಗತಿ ಕೋಣೆಗಳ ಒಳಗಡೆಯಲ್ಲಿ ಯಾವುದೇ ವಿದ್ಯಾರ್ಥಿ ಕೇಸರಿ ಶಾಲು ಹಾಗೂ ತಲೆವಸ್ತ್ರ, ಹಿಜಾಬು ಮುಂತಾಗಿ ಧರಿಸುವುದನ್ನು ತಡೆದಿದೆ. ಮುಂದಿನ ಆದೇಶ ಬರುವವರೆಗೆ ತರಗತಿ ಕೋಣೆಗಳಲ್ಲಿ ಅವುಗಳನ್ನು ಧರಿಸಿ ಯಾರೂ ಪಾಲ್ಗೊಳ್ಳುವಂತಿಲ್ಲ. ರಾಜ್ಯ ಸರಕಾರ ಇದನ್ನು ಯಥಾರ್ಥವಾಗಿ ಜಾರಿಗೊಳಿಸುವಲ್ಲಿ ವಿಫಲವಾಗಿರುವುದರಿಂದ ಮುಸ್ಲಿಂ ಅಲ್ಪಸಂಖ್ಯಾತ ಜನ ಸಮುದಾಯದಲ್ಲಿ ಮತ್ತಷ್ಟು ಆತಂಕ ಉಂಟಾಗುವಂತಾಗಿದೆ. ಮಾತ್ರವಲ್ಲ, ವರ್ಷದ ಕೊನೆಯ ಹಂತದಲ್ಲಿ ಸಮವಸ್ತ್ರದ ಕುರಿತು ಆದೇಶವನ್ನು ಏಕಾಏಕಿ ಹೊರಡಿಸಿದೆ’ ಎಂದಿದ್ದಾರೆ.