‘ಕಾರ್ಪೊರೇಟ್ ಕಂಪನಿಗಳ ನೀತಿಯನ್ನು ನಡೆಸಲು ಆದ್ಯತೆ ನೀಡಲಾಗುತ್ತಿದೆ. ಕುಡಿಯುವ ನೀರಿನ ಪೂರೈಕೆಗೆ ಆದ್ಯತೆ ಕೊಡುವುದು ಮತ್ತು ನೀರಿನ ಕುರಿತುಗೆ ಜಾಗೃತಿ ಮೂಡಿಸುವುದು ಎಂದು ಹೇಳಲಾಗುತ್ತಿದೆ. ಆದರೆ, ಇದು ಜನರನ್ನು ದಾರಿ ತಪ್ಪಿಸುವ ತಂತ್ರವಾಗಿದೆ. ರಾಜ್ಯದಲ್ಲಿ ಬೀಳಾದ 50 ಲಕ್ಷ ಎಕರೆ ಜಮೀನಿನಲ್ಲಿ, ಮಳೆ ನೀರು ಸಂಗ್ರಹದ ಮೂಲಕ ಅಂತರ್ಜಲ ವೃದ್ಧಿಸಿ ನೀರಾವರಿಗೆ ಒಳಪಡಿಸುವ ರೈತರ ಆಶಯಕ್ಕೆ, ಈ ಅಂತರ್ಜಲ ಬಳಕೆ ಮೀಟರೀಕರಣ ವಿರುದ್ಧವಾಗಿದೆ’ ಎಂದಿದ್ದಾರೆ.