ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಇದೊಂದು ಅತ್ಯಂತ ಗಂಭೀರ ಪ್ರಕರಣವಾಗಿದೆ. ಆದ್ದರಿಂದ, ರಾಜ್ಯ ಸರ್ಕಾರ ಈ ಕೂಡಲೇ ಸಚಿವ ಈಶ್ವರಪ್ಪ ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಪ್ರತಿಯೊಂದು ಗುತ್ತಿಗೆ ಕೆಲಸದಲ್ಲಿ ರಾಜ್ಯ ಸರ್ಕಾರದ ಸಚಿವರು, ಶಾಸಕರು, ಅಧಿಕಾರಿಗಳು, ಒಟ್ಟು ಕಾಮಗಾರಿಯ ಶೇ 40ರಷ್ಟು ಕಮಿಷನ್ ಪಡೆಯುತ್ತಿರುವುದಾಗಿ ಮತ್ತು ಇದರಿಂದ ಕಾಮಗಾರಿ ನಿರ್ವಹಣೆಗೆ, ಗುತ್ತಿಗೆದಾರರಿಗೆ ತೀವ್ರ ತೊಂದರೆಯಾಗಿದೆಯೆಂದು, ಇದನ್ನು ತಡೆಯಲು ಅಗತ್ಯ ಕ್ರಮವಹಿಸುವಂತೆ ಸ್ವತಃ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘವು ಪ್ರಧಾನಿಗೆ ಬಹಿರಂಗ ಪತ್ರ ಬರೆದು ಕಳೆದ ಐದಾರು ತಿಂಗಳುಗಳ ಹಿಂದೆಯೇ ಒತ್ತಾಯಿಸಿದ್ದರು. ಪ್ರಧಾನಿಗೆ ಮತ್ತು ಮುಖ್ಯಮಂತ್ರಿ ಆ ಕುರಿತು ಸೂಕ್ತ ಕ್ರಮವಹಿಸಿದ್ದರೆ ಸಂತೋಷ್ ಪಾಟೀಲ ಆತ್ಮಹತ್ಯೆ ತಡೆಯಬಹುದಿತ್ತು’ ಎಂದಿದ್ದಾರೆ.