<p><strong>ಕಲಬುರ್ಗಿ</strong>:ಜಿಲ್ಲೆಯ ನಾಲ್ಕು ಸಾವಿರಕ್ಕೂ ಅಧಿಕ ಕಾರ್ಮಿಕರು ಮಹಾರಾಷ್ಟ್ರದಲ್ಲಿದ್ದು, ಅವರನ್ನು ಕರೆತರಲು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹಾಗೂ ಸಂಸದ ಡಾ.ಉಮೇಶ ಜಾಧವ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಾರುತಿ ಮಾನ್ಪಡೆ ಒತ್ತಾಯಿಸಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಹಾರಾಷ್ಟ್ರದಿಂದ 600 ಬಸ್ಗಳಲ್ಲಿ ಅಭ್ಯರ್ಥಿಗಳು ಕಾರ್ಮಿಕರನ್ನು ವೋಟು ಹಾಕಿಸಲು ಕರೆತಂದಿದ್ದರು. ಈಗ ಬರುತ್ತೇನೆ ಎಂದು ಬೇಡಿಕೊಳ್ಳುತ್ತಿದ್ದರೂ ಜಾಧವ್ ಅವರಿಗೆ ಏನೂ ಅನಿಸುತ್ತಿಲ್ಲವೇ’ ಎಂದು ಪ್ರಶ್ನಿಸಿದರು.</p>.<p>‘ಗ್ರಾಮೀಣ ಭಾಗದಲ್ಲಿ ಜನರ ಕೈಯಲ್ಲಿ ಹಣ ಇಲ್ಲ. ಕೂಡಲೇ ಜಿಲ್ಲಾ ಪಂಚಾಯಿತಿಯಿಂದ ನರೇಗಾ ಕೆಲಸಗಳನ್ನು ಶುರು ಮಾಡಬೇಕು. ಚಿಂಚನಸೂರ ಹಾಗೂ ಸಿರಿಚಂದ ಗ್ರಾಮಗಳಲ್ಲಿ ಕೂಲಿಯನ್ನು ಇನ್ನೂ ನೀಡುತ್ತಿಲ್ಲ. ಇದು ತಡವಾದರೆ ಗ್ರಾಮೀಣ ಪ್ರದೇಶಗಳಲ್ಲಿ ಇನ್ನಷ್ಟೇ ಸಮಸ್ಯೆಗಳು ತಲೆದೋರಲಿವೆ’ ಎಂದು ಎಚ್ಚರಿಸಿದರು.</p>.<p>‘ಕೆಂಪು ವಲಯದಲ್ಲಿದ್ದ ಕಲಬುರ್ಗಿಯನ್ನು ಕಿತ್ತಳೆ ವಲಯಕ್ಕೆ ಬದಲಾಯಿಸಿದ್ದರಲ್ಲಿ ಮದ್ಯದ ಲಾಬಿ ಕೆಲಸ ಮಾಡಿದೆ. ಜಿಲ್ಲೆಯಲ್ಲಿರುವ 367 ಮದ್ಯದ ಅಂಗಡಿಗಳ ಪೈಕಿ 100 ಅಂಗಡಿಗಳು ಒಂದೇ ಕುಟುಂಬಕ್ಕೆ ಸೇರಿವೆ. ಸರ್ಕಾರ ಇಲ್ಲಿ ಮದ್ಯದಂಗಡಿ ತೆರೆಯಲು ಅನುಮತಿ ನೀಡಬಾರದಿತ್ತು’ ಎಂದರು.</p>.<p>ಸಿಪಿಐ ಜಿಲ್ಲಾ ಕಾರ್ಯದರ್ಶಿ ಭೀಮಾಶಂಕರ ಮಾಡಿಯಾಳ ಮಾತನಾಡಿ, ‘ಆಳಂದ ಮತ್ತು ಚಿಂಚೋಳಿ ತಾಲ್ಲೂಕುಗಳನ್ನು ಪ್ರತಿನಿಧಿಸುವ ಬೀದರ್ ಸಂಸದ ಭಗವಂತ ಖೂಬಾ ಅವರು ಒಮ್ಮೆಯೂ ಈ ತಾಲ್ಲೂಕುಗಳಿಗೆ ಭೇಟಿ ನೀಡಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರೂ ಬಂದಿಲ್ಲ’ ಎಂದು ಟೀಕಿಸಿದರು.</p>.<p>ಮುಖಂಡರಾದ ಶರಣಬಸಪ್ಪ ಮಮಶೆಟ್ಟಿ, ಮಹೇಶ ರಾಠೋಡ, ಪಾಂಡುರಂಗ ಮಾವಿನಕರ, ಸುಧಾಮ ಧನ್ನಿ ಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ</strong>:ಜಿಲ್ಲೆಯ ನಾಲ್ಕು ಸಾವಿರಕ್ಕೂ ಅಧಿಕ ಕಾರ್ಮಿಕರು ಮಹಾರಾಷ್ಟ್ರದಲ್ಲಿದ್ದು, ಅವರನ್ನು ಕರೆತರಲು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹಾಗೂ ಸಂಸದ ಡಾ.ಉಮೇಶ ಜಾಧವ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಾರುತಿ ಮಾನ್ಪಡೆ ಒತ್ತಾಯಿಸಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಹಾರಾಷ್ಟ್ರದಿಂದ 600 ಬಸ್ಗಳಲ್ಲಿ ಅಭ್ಯರ್ಥಿಗಳು ಕಾರ್ಮಿಕರನ್ನು ವೋಟು ಹಾಕಿಸಲು ಕರೆತಂದಿದ್ದರು. ಈಗ ಬರುತ್ತೇನೆ ಎಂದು ಬೇಡಿಕೊಳ್ಳುತ್ತಿದ್ದರೂ ಜಾಧವ್ ಅವರಿಗೆ ಏನೂ ಅನಿಸುತ್ತಿಲ್ಲವೇ’ ಎಂದು ಪ್ರಶ್ನಿಸಿದರು.</p>.<p>‘ಗ್ರಾಮೀಣ ಭಾಗದಲ್ಲಿ ಜನರ ಕೈಯಲ್ಲಿ ಹಣ ಇಲ್ಲ. ಕೂಡಲೇ ಜಿಲ್ಲಾ ಪಂಚಾಯಿತಿಯಿಂದ ನರೇಗಾ ಕೆಲಸಗಳನ್ನು ಶುರು ಮಾಡಬೇಕು. ಚಿಂಚನಸೂರ ಹಾಗೂ ಸಿರಿಚಂದ ಗ್ರಾಮಗಳಲ್ಲಿ ಕೂಲಿಯನ್ನು ಇನ್ನೂ ನೀಡುತ್ತಿಲ್ಲ. ಇದು ತಡವಾದರೆ ಗ್ರಾಮೀಣ ಪ್ರದೇಶಗಳಲ್ಲಿ ಇನ್ನಷ್ಟೇ ಸಮಸ್ಯೆಗಳು ತಲೆದೋರಲಿವೆ’ ಎಂದು ಎಚ್ಚರಿಸಿದರು.</p>.<p>‘ಕೆಂಪು ವಲಯದಲ್ಲಿದ್ದ ಕಲಬುರ್ಗಿಯನ್ನು ಕಿತ್ತಳೆ ವಲಯಕ್ಕೆ ಬದಲಾಯಿಸಿದ್ದರಲ್ಲಿ ಮದ್ಯದ ಲಾಬಿ ಕೆಲಸ ಮಾಡಿದೆ. ಜಿಲ್ಲೆಯಲ್ಲಿರುವ 367 ಮದ್ಯದ ಅಂಗಡಿಗಳ ಪೈಕಿ 100 ಅಂಗಡಿಗಳು ಒಂದೇ ಕುಟುಂಬಕ್ಕೆ ಸೇರಿವೆ. ಸರ್ಕಾರ ಇಲ್ಲಿ ಮದ್ಯದಂಗಡಿ ತೆರೆಯಲು ಅನುಮತಿ ನೀಡಬಾರದಿತ್ತು’ ಎಂದರು.</p>.<p>ಸಿಪಿಐ ಜಿಲ್ಲಾ ಕಾರ್ಯದರ್ಶಿ ಭೀಮಾಶಂಕರ ಮಾಡಿಯಾಳ ಮಾತನಾಡಿ, ‘ಆಳಂದ ಮತ್ತು ಚಿಂಚೋಳಿ ತಾಲ್ಲೂಕುಗಳನ್ನು ಪ್ರತಿನಿಧಿಸುವ ಬೀದರ್ ಸಂಸದ ಭಗವಂತ ಖೂಬಾ ಅವರು ಒಮ್ಮೆಯೂ ಈ ತಾಲ್ಲೂಕುಗಳಿಗೆ ಭೇಟಿ ನೀಡಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರೂ ಬಂದಿಲ್ಲ’ ಎಂದು ಟೀಕಿಸಿದರು.</p>.<p>ಮುಖಂಡರಾದ ಶರಣಬಸಪ್ಪ ಮಮಶೆಟ್ಟಿ, ಮಹೇಶ ರಾಠೋಡ, ಪಾಂಡುರಂಗ ಮಾವಿನಕರ, ಸುಧಾಮ ಧನ್ನಿ ಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>