<p><strong>ಜೇವರ್ಗಿ</strong>: 2025-26ನೇ ಸಾಲಿನ ಕೇಂದ್ರ ಬಜೆಟ್ ಭಾರತದ ಜನರ ಅವಶ್ಯಕತೆಗಳಿಗೆ ಮಾಡಿರುವ ಕ್ರೂರ ವಿಶ್ವಾಸ ದ್ರೋಹವಾಗಿದೆ ಎಂದು ಸಿಪಿಎಂ ತಾಲ್ಲೂಕು ಕಾರ್ಯದರ್ಶಿ ಸುಭಾಷ ಹೊಸಮನಿ ಆರೋಪಿಸಿದರು.</p>.<p>ಕೇಂದ್ರ ಬಜೆಟ್ ವಿರೋಧಿಸಿ ಸಿಪಿಎಂ ತಾಲ್ಲೂಕು ಘಟಕದ ವತಿಯಿಂದ ಮಂಗಳವಾರ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಹಮ್ಮಿಕೊಂಡ ಪ್ರತಿಭಟನೆ ಉದ್ದೇಶಿಸಿ ಅವರು ಮಾತನಾಡಿದರು.</p>.<p>‘ಶ್ರೀಮಂತರಿಂದ ಶ್ರೀಮಂತರಿಗಾಗಿ ಮಾತ್ರ ಈ ಬಜೆಟ್ ಆಗಿದೆ. ಒಕ್ಕೂಟ ತತ್ವವನ್ನು ದುರ್ಬಲಗೊಳಿಸುವ ಮತ್ತು ರಾಜ್ಯಗಳ ಹಕ್ಕುಗಳ ಮೇಲೆ ದಾಳಿ ನಡೆಸುವ ನಿಲುವನ್ನು ಇದು ಬಿಂಬಿಸುತ್ತದೆ. ಮೋದಿ ಸರ್ಕಾರದ ದಿವಾಳಿತನವನ್ನು ಬಿಂಬಿಸುವ ಈ ಬಜೆಟ್ ದೇಶದ ಅರ್ಥ ವ್ಯವಸ್ಥೆ ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿದೆ’ ಎಂದು ಟೀಕಿಸಿದರು.<br />‘ತೆರಿಗೆ ವಿನಾಯಿತಿ ಮಿತಿಯನ್ನು 12 ಲಕ್ಷಕ್ಕೆ ಹೆಚ್ಚಿಸುವ ಮೂಲಕ ಮಧ್ಯಮ ವರ್ಗಗಳಿಗೆ ಸಹಾಯ ಮಾಡಲಾಗುತ್ತಿದೆ. ವಾಸ್ತವವಾಗಿ ಆದಾಯ ತೆರಿಗೆ ರಿಯಾಯಿತಿಗಳಿಂದಾಗಿ ಸರ್ಕಾರ ಅನುಭವಿಸುವ ₹ 1 ಲಕ್ಷ ಕೋಟಿ ನಷ್ಟದಿಂದ ಪ್ರಯೋಜನದ ಪಾಲು ಪಡೆಯುವವರು ಶೇ 1ರಷ್ಟು ಮಂದಿ ಮಾತ್ರ ಇದ್ದಾರೆ’ ಎಂದರು.</p>.<p>ನಂತರ ತಹಶೀಲ್ದಾರ್ ಮಲ್ಲಣ್ಣ ಯಲಗೋಡ ಅವರ ಮೂಲಕ ಪ್ರಧಾನಮಂತ್ರಿಗೆ ಮನವಿ ಪತ್ರ ಸಲ್ಲಿಸಲಾಯಿತು.</p>.<p>ಪ್ರತಿಭಟನೆಯಲ್ಲಿ ಸಿಪಿಎಂ ತಾಲ್ಲೂಕು ಸಮಿತಿ ಸದಸ್ಯರಾದ ಸಿದ್ದರಾಮಯ್ಯ ಹರವಾಳ, ಮಲ್ಕಪ್ಪ ಹರನೂರ, ಬೀರಪ್ಪ ಯಾತನೂರ, ರಾಜು ರೇವನೂರ, ಆನಂದಪ್ಪ ಹರವಾಳ, ಸಿದ್ದಣ್ಣ ಹೊಸಮನಿ, ಉಸ್ಮಾನ ಅಲಿ ಹರನೂರ, ಶಾಂತಪ್ಪ ಗಣಜಲಖೇಡ ಹರವಾಳ, ಈರಣ್ಣ ರೇವನೂರ, ಲಿಂಗಣ್ಣ ತಳವಾರ ಸೇರಿ ಹಲವರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೇವರ್ಗಿ</strong>: 2025-26ನೇ ಸಾಲಿನ ಕೇಂದ್ರ ಬಜೆಟ್ ಭಾರತದ ಜನರ ಅವಶ್ಯಕತೆಗಳಿಗೆ ಮಾಡಿರುವ ಕ್ರೂರ ವಿಶ್ವಾಸ ದ್ರೋಹವಾಗಿದೆ ಎಂದು ಸಿಪಿಎಂ ತಾಲ್ಲೂಕು ಕಾರ್ಯದರ್ಶಿ ಸುಭಾಷ ಹೊಸಮನಿ ಆರೋಪಿಸಿದರು.</p>.<p>ಕೇಂದ್ರ ಬಜೆಟ್ ವಿರೋಧಿಸಿ ಸಿಪಿಎಂ ತಾಲ್ಲೂಕು ಘಟಕದ ವತಿಯಿಂದ ಮಂಗಳವಾರ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಹಮ್ಮಿಕೊಂಡ ಪ್ರತಿಭಟನೆ ಉದ್ದೇಶಿಸಿ ಅವರು ಮಾತನಾಡಿದರು.</p>.<p>‘ಶ್ರೀಮಂತರಿಂದ ಶ್ರೀಮಂತರಿಗಾಗಿ ಮಾತ್ರ ಈ ಬಜೆಟ್ ಆಗಿದೆ. ಒಕ್ಕೂಟ ತತ್ವವನ್ನು ದುರ್ಬಲಗೊಳಿಸುವ ಮತ್ತು ರಾಜ್ಯಗಳ ಹಕ್ಕುಗಳ ಮೇಲೆ ದಾಳಿ ನಡೆಸುವ ನಿಲುವನ್ನು ಇದು ಬಿಂಬಿಸುತ್ತದೆ. ಮೋದಿ ಸರ್ಕಾರದ ದಿವಾಳಿತನವನ್ನು ಬಿಂಬಿಸುವ ಈ ಬಜೆಟ್ ದೇಶದ ಅರ್ಥ ವ್ಯವಸ್ಥೆ ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿದೆ’ ಎಂದು ಟೀಕಿಸಿದರು.<br />‘ತೆರಿಗೆ ವಿನಾಯಿತಿ ಮಿತಿಯನ್ನು 12 ಲಕ್ಷಕ್ಕೆ ಹೆಚ್ಚಿಸುವ ಮೂಲಕ ಮಧ್ಯಮ ವರ್ಗಗಳಿಗೆ ಸಹಾಯ ಮಾಡಲಾಗುತ್ತಿದೆ. ವಾಸ್ತವವಾಗಿ ಆದಾಯ ತೆರಿಗೆ ರಿಯಾಯಿತಿಗಳಿಂದಾಗಿ ಸರ್ಕಾರ ಅನುಭವಿಸುವ ₹ 1 ಲಕ್ಷ ಕೋಟಿ ನಷ್ಟದಿಂದ ಪ್ರಯೋಜನದ ಪಾಲು ಪಡೆಯುವವರು ಶೇ 1ರಷ್ಟು ಮಂದಿ ಮಾತ್ರ ಇದ್ದಾರೆ’ ಎಂದರು.</p>.<p>ನಂತರ ತಹಶೀಲ್ದಾರ್ ಮಲ್ಲಣ್ಣ ಯಲಗೋಡ ಅವರ ಮೂಲಕ ಪ್ರಧಾನಮಂತ್ರಿಗೆ ಮನವಿ ಪತ್ರ ಸಲ್ಲಿಸಲಾಯಿತು.</p>.<p>ಪ್ರತಿಭಟನೆಯಲ್ಲಿ ಸಿಪಿಎಂ ತಾಲ್ಲೂಕು ಸಮಿತಿ ಸದಸ್ಯರಾದ ಸಿದ್ದರಾಮಯ್ಯ ಹರವಾಳ, ಮಲ್ಕಪ್ಪ ಹರನೂರ, ಬೀರಪ್ಪ ಯಾತನೂರ, ರಾಜು ರೇವನೂರ, ಆನಂದಪ್ಪ ಹರವಾಳ, ಸಿದ್ದಣ್ಣ ಹೊಸಮನಿ, ಉಸ್ಮಾನ ಅಲಿ ಹರನೂರ, ಶಾಂತಪ್ಪ ಗಣಜಲಖೇಡ ಹರವಾಳ, ಈರಣ್ಣ ರೇವನೂರ, ಲಿಂಗಣ್ಣ ತಳವಾರ ಸೇರಿ ಹಲವರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>