<p><strong>ಕಲಬುರ್ಗಿ: </strong>2013ರಲ್ಲಿ ಕೆಲಸ ಕಾಯಂ ಮಾಡಿ ಕೊಡುವುದಾಗಿ ಹೇಳಿ ₹ 10 ಸಾವಿರ ಲಂಚ ಪಡೆದಿದ್ದ, ಅಂದಿನ ಸೇಡಂ ಪುರಸಭೆ ಮುಖ್ಯಾಧಿಕಾರಿ ಬಸವರಾಜ ಮಡಿವಾಳಪ್ಪ ಶಿವಪೂಜೆ ಅವರಿಗೆ ಜಿಲ್ಲಾ ಪ್ರಧಾನ ಹಾಗೂ ವಿಶೇಷ ಸೆಷನ್ಸ್ ನ್ಯಾಯಾಲಯವು ಗುರುವಾರ ಆರು ವರ್ಷ ಶಿಕ್ಷೆ ಹಾಗೂ ₹ 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.</p>.<p>ಈ ಅಧಿಕಾರಿ 2013ರಲ್ಲಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಬೀಸಿದ ಬಲೆಗೆ ಸಿಕ್ಕಿಬಿದ್ದಿದ್ದರು. ಏಳು ವರ್ಷಗಳ ಬಳಿಕ ಅವರಿಗೆ ಶಿಕ್ಷೆಯಾಗಿದೆ.</p>.<p>‘ಸೇಡಂ ಪುರಸಭೆಯ ಆಶ್ರಯ ಮನೆ ಶಾಖೆಯ ಪ್ರಭಾರಿ ಆಗಿದ್ದ ನಮ್ಮ ತಂದೆಯವರ ಕೆಲಸವನ್ನು ಕಾಯಂ ಮಾಡಿಕೊಡುವುದಾಗಿ ನಂಬಿಸಿ, ಅವರಿಂದ ₹ 10 ಸಾವಿರ ಲಂಚ ಕೇಳಿದ್ದಾರೆ’ ಎಂದು ಆರೋಪಿಸಿ ಸೇಡಂ ನಿವಾಸಿ ಶ್ರೀನಿವಾಸ ಹನುಮಾ ನಾಯಕ ಎಂಬುವವರು ದೂರು ನೀಡಿದ್ದರು. ಇದನ್ನು ಆಧರಿಸಿ ಪೊಲೀಸ್ ಇನ್ಸ್ಪೆಕ್ಟರ್ ಜೇಮ್ಸ್ ಮಿನೇಜಸ್ ಅವರು ದೂರು ದಾಖಲಿಸಿಕೊಂಡಿದ್ದರು. ಕಲಬುರ್ಗಿಯ ಉಪನೋಂದಣಾಧಿಕಾರಿ ಕಚೇರಿ ಮುಂದೆ ಆರೋಪಿಯು ₹ 5 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದ. ನಂತರ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಟಿ.ಆರ್. ರಾಘವೇಂದ್ರ ಅವರು ಪ್ರಕರಣದ ತನಿಖೆ ನಡೆಸಿ, 2016ರಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.</p>.<p>ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಪ್ರಧಾನ ಹಾಗೂ ವಿಶೇಷ ಸೆಷನ್ಸ್ ನ್ಯಾಯಾಧೀಶರಾದ ಆರ್.ಜೆ. ಸತೀಶಸಿಂಗ್ ಅವರು ಅಪರಾಧಿಗೆ ಶಿಕ್ಷೆ ವಿಧಿಸಿದ್ದಾರೆ.</p>.<p>ಈ ಪ್ರಕರಣದಲ್ಲಿ ಪ್ರಕರಣಕ್ಕೆ ಸಂಬಂಧಪಟ್ಟ ಕ್ರಮಬದ್ಧವಾದ ಮಾಹಿತಿಯನ್ನು ಅಬ್ದುಲ್ ನಬಿ ಅವರು ತಿಳಿಸಿ, ಸಾಕ್ಷ್ಯಾಧಾರಗಳನ್ನು ನ್ಯಾಯಾಲಯದಲ್ಲಿ ಒದಗಿಸಲು ಉತ್ತಮ ಕಾರ್ಯ ನಿರ್ವಹಿಸಿದ್ದಾರೆ. ಲೋಕಾಯುಕ್ತದ ಪರವಾಗಿ ವಿಶೇಷ ಸಾರ್ವಜನಿಕ ಅಭಿಯೋಜಕ ಎ.ಎಸ್. ಚಾಂದಕವಟೆ ಅವರು ವಾದ ಮಂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>2013ರಲ್ಲಿ ಕೆಲಸ ಕಾಯಂ ಮಾಡಿ ಕೊಡುವುದಾಗಿ ಹೇಳಿ ₹ 10 ಸಾವಿರ ಲಂಚ ಪಡೆದಿದ್ದ, ಅಂದಿನ ಸೇಡಂ ಪುರಸಭೆ ಮುಖ್ಯಾಧಿಕಾರಿ ಬಸವರಾಜ ಮಡಿವಾಳಪ್ಪ ಶಿವಪೂಜೆ ಅವರಿಗೆ ಜಿಲ್ಲಾ ಪ್ರಧಾನ ಹಾಗೂ ವಿಶೇಷ ಸೆಷನ್ಸ್ ನ್ಯಾಯಾಲಯವು ಗುರುವಾರ ಆರು ವರ್ಷ ಶಿಕ್ಷೆ ಹಾಗೂ ₹ 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.</p>.<p>ಈ ಅಧಿಕಾರಿ 2013ರಲ್ಲಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಬೀಸಿದ ಬಲೆಗೆ ಸಿಕ್ಕಿಬಿದ್ದಿದ್ದರು. ಏಳು ವರ್ಷಗಳ ಬಳಿಕ ಅವರಿಗೆ ಶಿಕ್ಷೆಯಾಗಿದೆ.</p>.<p>‘ಸೇಡಂ ಪುರಸಭೆಯ ಆಶ್ರಯ ಮನೆ ಶಾಖೆಯ ಪ್ರಭಾರಿ ಆಗಿದ್ದ ನಮ್ಮ ತಂದೆಯವರ ಕೆಲಸವನ್ನು ಕಾಯಂ ಮಾಡಿಕೊಡುವುದಾಗಿ ನಂಬಿಸಿ, ಅವರಿಂದ ₹ 10 ಸಾವಿರ ಲಂಚ ಕೇಳಿದ್ದಾರೆ’ ಎಂದು ಆರೋಪಿಸಿ ಸೇಡಂ ನಿವಾಸಿ ಶ್ರೀನಿವಾಸ ಹನುಮಾ ನಾಯಕ ಎಂಬುವವರು ದೂರು ನೀಡಿದ್ದರು. ಇದನ್ನು ಆಧರಿಸಿ ಪೊಲೀಸ್ ಇನ್ಸ್ಪೆಕ್ಟರ್ ಜೇಮ್ಸ್ ಮಿನೇಜಸ್ ಅವರು ದೂರು ದಾಖಲಿಸಿಕೊಂಡಿದ್ದರು. ಕಲಬುರ್ಗಿಯ ಉಪನೋಂದಣಾಧಿಕಾರಿ ಕಚೇರಿ ಮುಂದೆ ಆರೋಪಿಯು ₹ 5 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದ. ನಂತರ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಟಿ.ಆರ್. ರಾಘವೇಂದ್ರ ಅವರು ಪ್ರಕರಣದ ತನಿಖೆ ನಡೆಸಿ, 2016ರಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.</p>.<p>ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಪ್ರಧಾನ ಹಾಗೂ ವಿಶೇಷ ಸೆಷನ್ಸ್ ನ್ಯಾಯಾಧೀಶರಾದ ಆರ್.ಜೆ. ಸತೀಶಸಿಂಗ್ ಅವರು ಅಪರಾಧಿಗೆ ಶಿಕ್ಷೆ ವಿಧಿಸಿದ್ದಾರೆ.</p>.<p>ಈ ಪ್ರಕರಣದಲ್ಲಿ ಪ್ರಕರಣಕ್ಕೆ ಸಂಬಂಧಪಟ್ಟ ಕ್ರಮಬದ್ಧವಾದ ಮಾಹಿತಿಯನ್ನು ಅಬ್ದುಲ್ ನಬಿ ಅವರು ತಿಳಿಸಿ, ಸಾಕ್ಷ್ಯಾಧಾರಗಳನ್ನು ನ್ಯಾಯಾಲಯದಲ್ಲಿ ಒದಗಿಸಲು ಉತ್ತಮ ಕಾರ್ಯ ನಿರ್ವಹಿಸಿದ್ದಾರೆ. ಲೋಕಾಯುಕ್ತದ ಪರವಾಗಿ ವಿಶೇಷ ಸಾರ್ವಜನಿಕ ಅಭಿಯೋಜಕ ಎ.ಎಸ್. ಚಾಂದಕವಟೆ ಅವರು ವಾದ ಮಂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>