ಸೇಡಂ ಪಟ್ಟಣದ ನಿವಾಸಿ ಇಂದೂಬಾಯಿ (56) ಆತ್ಮಹತ್ಯೆಗೆ ಶರಣಾದವರು. ಮೂರು ದಿನಗಳ ಹಿಂದೆ ಅವರ ಪತಿ ಹಾಗೂ ಪತ್ರನಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ನಗರದ ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪತಿ ಆರೋಗ್ಯದಲ್ಲಿ ಏರುಪೇರಾಗಿದ್ದು ಅವರಿಗೆ ವೆಂಟಿಲೇಟರ್ನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.