<p><strong>ಕಲಬುರಗಿ: </strong>ಇಲ್ಲಿನ ವೆಂಕಟೇಶ ನಗರದ ಎರಡು ಮನೆಗಳ ಕೀಲಿ ಮುರಿದು ಕಳ್ಳತನ ಮಾಡಿರುವ ಕಳ್ಳರು 5 ತೊಲೆ ಬಂಗಾರ ಹಾಗೂ ₹ 20 ಸಾವಿರ ನಗದು ಸೇರಿದಂತೆ ₹ 2.55 ಲಕ್ಷ ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ.</p>.<p>ಬೆಳಗಿನ ಜಾವ ಮೂರು ಗಂಟೆಗೆ ಮೊದಲ ಮಹಡಿಯಲ್ಲಿ ಬಾಡಿಗೆ ಇದ್ದ ವಿಜಯಕುಮಾರ್ ದೇವಣಗಾಂವ ಅವರಿಗೆ ಸೇರಿದ ಮನೆಯ ಕೀಲಿ ಮುರಿದು ಲಾಕರ್ ನಲ್ಲಿ ಇಟ್ಟಿದ್ದ ಚಿನ್ನಾಭರಣ ಕಳ್ಳತನ ಮಾಡಿದ್ದಾರೆ. ಈ ಮನೆ ಮಾಲೀಕರು ಬಳ್ಳಾರಿಯಲ್ಲಿದ್ದು, ವಿಜಯಕುಮಾರ್ ಅವರು ಕಳೆದ 10 ವರ್ಷಗಳಿಂದ ಇದೇ ಮನೆಯಲ್ಲಿ ನೆಲೆಸಿದ್ದಾರೆ.</p>.<p>ಕೆಳಭಾಗದ ಮನೆಯಲ್ಲಿ ಬಟ್ಟೆ ವ್ಯಾಪಾರಿಯೊಬ್ಬರು ಬಟ್ಟೆಗಳನ್ನು ಸಂಗ್ರಹಿಸಿದ್ದರು. ಬಟ್ಟೆ ಇದ್ದ ಮನೆಯ ಷಟರ್ ನ ಮೂರು ಕೀಲಿ ಮುರಿದು ಒಳನುಗ್ಗಿದ್ದಾರೆ. ಆದರೆ, ಹಣ ಸಿಕ್ಕಿಲ್ಲ. ಎರಡು ಜೊತೆ ಬಟ್ಟೆ ಕದ್ದೊಯ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಸ್ಥಳಕ್ಕೆ ಭೇಟಿ ನೀಡಿದ ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರು ಎರಡೂ ಮನೆಗಳನ್ನು ಪರಿಶೀಲಿಸಿದರು.</p>.<p>'ಮನೆಗೆ ಕೀಲಿ ಹಾಕಿಕೊಂಡು ಊರಿಗೆ ಹೋಗಿದ್ದೆವು. ಮರಳಿ ಬರುವಷ್ಟರಲ್ಲಿ ಕಳ್ಳತನವಾಗಿದೆ' ಎಂದು ವಿಜಯಕುಮಾರ್ ದೇವಣಗಾಂವ 'ಪ್ರಜಾವಾಣಿ'ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ: </strong>ಇಲ್ಲಿನ ವೆಂಕಟೇಶ ನಗರದ ಎರಡು ಮನೆಗಳ ಕೀಲಿ ಮುರಿದು ಕಳ್ಳತನ ಮಾಡಿರುವ ಕಳ್ಳರು 5 ತೊಲೆ ಬಂಗಾರ ಹಾಗೂ ₹ 20 ಸಾವಿರ ನಗದು ಸೇರಿದಂತೆ ₹ 2.55 ಲಕ್ಷ ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ.</p>.<p>ಬೆಳಗಿನ ಜಾವ ಮೂರು ಗಂಟೆಗೆ ಮೊದಲ ಮಹಡಿಯಲ್ಲಿ ಬಾಡಿಗೆ ಇದ್ದ ವಿಜಯಕುಮಾರ್ ದೇವಣಗಾಂವ ಅವರಿಗೆ ಸೇರಿದ ಮನೆಯ ಕೀಲಿ ಮುರಿದು ಲಾಕರ್ ನಲ್ಲಿ ಇಟ್ಟಿದ್ದ ಚಿನ್ನಾಭರಣ ಕಳ್ಳತನ ಮಾಡಿದ್ದಾರೆ. ಈ ಮನೆ ಮಾಲೀಕರು ಬಳ್ಳಾರಿಯಲ್ಲಿದ್ದು, ವಿಜಯಕುಮಾರ್ ಅವರು ಕಳೆದ 10 ವರ್ಷಗಳಿಂದ ಇದೇ ಮನೆಯಲ್ಲಿ ನೆಲೆಸಿದ್ದಾರೆ.</p>.<p>ಕೆಳಭಾಗದ ಮನೆಯಲ್ಲಿ ಬಟ್ಟೆ ವ್ಯಾಪಾರಿಯೊಬ್ಬರು ಬಟ್ಟೆಗಳನ್ನು ಸಂಗ್ರಹಿಸಿದ್ದರು. ಬಟ್ಟೆ ಇದ್ದ ಮನೆಯ ಷಟರ್ ನ ಮೂರು ಕೀಲಿ ಮುರಿದು ಒಳನುಗ್ಗಿದ್ದಾರೆ. ಆದರೆ, ಹಣ ಸಿಕ್ಕಿಲ್ಲ. ಎರಡು ಜೊತೆ ಬಟ್ಟೆ ಕದ್ದೊಯ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಸ್ಥಳಕ್ಕೆ ಭೇಟಿ ನೀಡಿದ ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರು ಎರಡೂ ಮನೆಗಳನ್ನು ಪರಿಶೀಲಿಸಿದರು.</p>.<p>'ಮನೆಗೆ ಕೀಲಿ ಹಾಕಿಕೊಂಡು ಊರಿಗೆ ಹೋಗಿದ್ದೆವು. ಮರಳಿ ಬರುವಷ್ಟರಲ್ಲಿ ಕಳ್ಳತನವಾಗಿದೆ' ಎಂದು ವಿಜಯಕುಮಾರ್ ದೇವಣಗಾಂವ 'ಪ್ರಜಾವಾಣಿ'ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>