ಮಂಗಳವಾರ, 16 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಕಲಬುರಗಿ | ಬೆಳೆ ಹಾನಿ ಪರಿಶೀಲಿಸಿದ ಸಚಿವ ಪ್ರಿಯಾಂಕ್

ಜಿಲ್ಲೆಯಲ್ಲಿ 1.05 ಲಕ್ಷ ಹೆಕ್ಟೇರ್ ಬೆಳೆ ನಷ್ಟ; ವಿಮೆ ಪರಿಹಾರ ಶೀಘ್ರ ಪಾವತಿಗೆ ಕ್ರಮ
Published : 16 ಸೆಪ್ಟೆಂಬರ್ 2025, 6:00 IST
Last Updated : 16 ಸೆಪ್ಟೆಂಬರ್ 2025, 6:00 IST
ಫಾಲೋ ಮಾಡಿ
Comments
ಜಿಲ್ಲೆಯ ಗ್ರಾಮೀಣ ರಸ್ತೆಗಳು ಹದಗೆಟ್ಟಿದ್ದು ಅವುಗಳ ದುರಸ್ತಿಗಾಗಿ ಜಿಲ್ಲಾಧಿಕಾರಿ ಪಿಡಿ ಖಾತೆಯಲ್ಲಿ ₹40 ಕೋಟಿ ಹಣವಿದ್ದು ಅದನ್ನು ಬಳಸಿಕೊಳ್ಳುವಂತೆ ಸೂಚಿಸಲಾಗಿದೆ. ಕಲಬುರಗಿ ನಗರದ ರಸ್ತೆಗಳನ್ನು ಆಡಿಟ್ ಮಾಡಿಸಿ ದುರಸ್ತಿ ಅಥವಾ ಹೊಸದಾಗಿ ನಿರ್ಮಾಣ ಮಾಡುವ ಬಗ್ಗೆ ತೀರ್ಮಾನಿಸಲಾಗುವುದು
ಪ್ರಿಯಾಂಕ್ ಖರ್ಗೆ ಜಿಲ್ಲಾ ಉಸ್ತುವಾರಿ ಸಚಿವ
‘ಸಂಪುಟ ಪುನರ್ ರಚನೆ ಮಾಹಿತಿಯಿಲ್ಲ’
ಸಚಿವ ಸಂಪುಟ ಪುನರ್ ರಚನೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದರು. ಜೇವರ್ಗಿ ಶಾಸಕ ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಅವರು ತಾವೂ ಸಚಿವ ಸ್ಥಾನದ ಆಕಾಂಕ್ಷಿ ಎಂದು ಹೇಳಿರುವ ಕುರಿತು ಸೋಮವಾರ ಪ್ರತಿಕ್ರಿಯೆ ನೀಡಿದ ಅವರು ‘ಯಾರು ಬೇಕಾದರೂ ಸಚಿವ ಸ್ಥಾನಕ್ಕೆ ಬೇಡಿಕೆ ಸಲ್ಲಿಸಬಹುದು. ಅದನ್ನು ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಎಐಸಿಸಿ ಅಧ್ಯಕ್ಷರು ತೀರ್ಮಾನಿಸುತ್ತಾರೆ. ಕೆಲವರು ಎಐಸಿಸಿ ಅಧ್ಯಕ್ಷರು ಮುಖ್ಯಮಂತ್ರಿಗೆ ಆಪ್ತರಿರುತ್ತಾರೆ. ಅವರಿಗೂ ತಮ್ಮ ಬೇಡಿಕೆ ಸಲ್ಲಿಸಿರಬಹುದು’ ಎಂದರು.
‘ನನ್ನ ಅವಧಿಯಲ್ಲೇ ಜಿ.ಪಂ. ತಾ.ಪಂ. ಚುನಾವಣೆ’
‘ಕ್ಷೇತ್ರಗಳ ಮರು ವಿಂಗಡಣೆ ಪ್ರಯುಕ್ತ ಜಿಲ್ಲಾ ಪಂಚಾಯಿತಿ ತಾಲ್ಲೂಕು ಪಂಚಾಯಿತಿ ಚುನಾವಣೆಗಳು ವಿಳಂಬವಾಗಿದ್ದು ನಾನು ಗ್ರಾಮೀಣಾಭಿವೃದ್ದಿ ಪಂಚಾಯತರಾಜ್ ಸಚಿವನಾಗಿರುವ ವೇಳೆಯೇ ಚುನಾವಣೆಗಳನ್ನು ನಡೆಸುವುದು ನಿಶ್ಚಿತ’ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು. ಕೆಲ ಗ್ರಾಮಗಳು ನಗರದ ವ್ಯಾಪ್ತಿಗೆ ಸೇರಿದ್ದರಿಂದ ಪುನರ್ ವಿಂಗಡಣೆ ಮಾಡುವುದಕ್ಕೆ ಸಮಯ ಬೇಕಾಗಿತ್ತು ಎಂದು ಸ್ಪಷ್ಟಪಡಿಸಿದರು. ‘ಪಿಡಿಒಗಳ ಕೊರತೆ ನೀಗಿಸಲು ಕೆಪಿಎಸ್‌ಸಿ ಮೂಲಕ ಪರೀಕ್ಷೆ ನಡೆಸಿದ್ದು ತಪ್ಪು ಎಂದು ಈಗ ಅರಿವಾಗುತ್ತಿದೆ. ಯಾವುದಾದರೂ ಕೆಲಸ ಆಗಬಾರದು ಎಂದರೆ ಕೆಪಿಎಸ್‌ಸಿಗೆ ವಹಿಸಬೇಕು. ಕರ್ನಾಟಕ ‍ಪರೀಕ್ಷಾ ಪ್ರಾಧಿಕಾರಕ್ಕೆ ವಹಿಸಿದ್ದರೆ ಈಗಾಗಲೇ ನೇಮಕಾತಿ ಪ್ರಕ್ರಿಯೆ ಮುಗಿಯುತ್ತಿತ್ತು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT