ಬಹುತೇಕ ನದಿ, ಹಳ್ಳಕೊಳ್ಳಗಳು ತುಂಬಿ ಪಕ್ಕದ ಹೊಲಗಳಿಗೆ ನೀರು ನುಗಿತು. ಇದರಿಂದ ನೂರಾರು ಎಕರೆಯಲ್ಲಿನ ಹೆಸರು, ಉದ್ದು, ತೊಗರಿ ಬೆಳೆಗಳಿಗೆ ಹಾನಿಯಾಯಿತು. ಮಳೆಯ ಹೊಡೆತಕ್ಕೆ ಸಿಲುಕಿದ ತೊಗರಿಯ ಬೆಳವಣಿಗೆ ಕುಂಠಿತಗೊಂಡಿದೆ. ಬಿತ್ತನೆಗೆ ಮಾಡಿದ್ದ ಖರ್ಚು ಮಣ್ಣು ಪಾಲಿಗಿದೆ.ಹೂ ಬೀಡುವ ವೇಳೆಯಲ್ಲೇ ಹೆಸರು ಮತ್ತು ಉದ್ದು ಬೆಳೆಗಳು ಹೆಚ್ಚಿದ ತೇವಾಂಶಕ್ಕೆ ಬಾಡುತ್ತಿವೆ. ಕೈಗೆ ಬಂದ ತುತ್ತು ಬಾಯಿಗೆ ಬರುತ್ತಿಲ್ಲ ಎಂಬುದು ರೈತರ ಅಳಲು.