ರೈತರು, ತಮ್ಮ ಮೊಬೈಲ್ ಬಳಸಿ, ತಾವೇ ಬೆಳೆ ಮಾಹಿತಿ ದಾಖಲಿಸುವುದರಿಂದ ಮಾಹಿತಿ ನಿಖರವಾಗಿರುತ್ತದೆ. ಇದರಿಂದ ತಪ್ಪುಗಳು ಆಗುವ ಸಾಧ್ಯತೆ ಇರುವುದಿಲ್ಲ. ಸರ್ವೇ ನಂಬರ್ ಹಿಸ್ಸಾವಾರು ಬೆಳೆ ಸರಿಯಾಗಿ ದಾಖಲಾಗುತ್ತದೆ. ವಿವಿಧ ಯೋಜನೆಗಳಿಗೆ ಸರ್ಕಾರದಿಂದ ಬೆಳೆ ಸಮೀಕ್ಷೆ ಮಾಹಿತಿ ಬಳಸುತ್ತಿರುವುದರಿಂದ ರೈತರಿಗೆ ಅಲೆದಾಟ ತಪ್ಪುತ್ತದೆ. ಬೆಳೆ ವಿಮೆ, ಇನ್ಪುಟ್ ಸಬ್ಸಿಡಿ, ಬೆಳೆಸಾಲ ಹಾಗೂ ಕೀಟರೋಗಕ್ಕೆ ಒಳಗಾದ ಬೆಳೆಗೆ ಸರ್ಕಾರದಿಂದ ಪರಿಹಾರ ಧನ ಸಹಾಯ ನೀಡಲು ಬೆಳೆ ಸಮೀಕ್ಷೆ ಮಾಹಿತಿ ಬಳಸುತ್ತಿರುವುದರಿಂದ ಮುಂದಿನ ದಿನಗಳಲ್ಲಿ ರೈತರು ಖುದ್ದಾಗಿ ದಾಖಲಿಸಿ, ನನ್ನ ಬೆಳೆ ನನ್ನ ಸಮೀಕ್ಷೆ ಎನ್ನುವ ಬೆಳೆ ಸಮೀಕ್ಷೆ ಮುಂಗಾರು–2023 ಕಾರ್ಯಕ್ರಮ ಯಶಸ್ವಿಗೊಳಿಸಲು ಮನವಿ ಮಾಡಿದರು.