ಕಮಲಾಪುರ(ಕಲಬುರಗಿ): ತಾಲ್ಲೂಕಿನ ಭಿಮನಾಳ ಕ್ರಾಸ್ ಬಳಿ ಕ್ರೂಸರ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ.
ತೆಲಂಗಾಣ ರಾಜ್ಯದ ಹನಮಕೊಂಡಾ ನಗರದ ಉಜಲಿಬೇಸ ನಿವಾಸಿ ಮಹಮ್ಮದ್ ಅಬ್ದುಲ್ ಮಜೀದ ಸಿದ್ಧಿಖಿ (71) ಮತ್ತು ಹೈದರಾಬಾದ್ನ ಬಾಲಾಜಿ ನಗರದ ಸಾದಯಾ ಖುನ್ನಿಸಾ ಬೇಗಂ (55) ಮೃತರು.
ಹುಸೇನ್(7) ಅವರ ಸ್ಥಿತಿ ಚಿಂತಾಜನಕವಾಗಿದ್ದು, ಗಂಭೀರವಾಗಿ ಗಾಯಗೊಂಡ ಫರಹತ್ ಸುಲ್ತಾನಾ, ಅರ್ಜುಮನ್ ಇಂತಿಮಾ ಸುಲ್ತಾನ್ ಅವರನ್ನುಕಲಬುರಗಿ ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭಾನುವಾರ ಬೆಳಿಗ್ಗೆ ಎರಡು ಕಾರುಗಳ ಮೂಲಕ ಕಲಬುರಗಿಯ ಖ್ವಾಜಾ ಬಂದೇ ನವಾಜ್ ದರ್ಗಾ ದರ್ಶನಕ್ಕೆ ತೆರಳುತ್ತಿದ್ದರು. ಕಲಬುರಗಿಯಿಂದ ಬೀದರ್ನ ಗುರುನಾನಕ್ಗೆ ತೆರಳುತ್ತಿದ್ದ ಕ್ರೂಸರ್ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.