ಈ ಕುರಿತು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ ಬಿ.ಆರ್. ಪಾಟೀಲ, ‘ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದಾಗಲೂ ಶಾಸಕನಾದ ನನ್ನನ್ನು ವಿಶ್ವವಿದ್ಯಾಲಯದ ಯಾವೊಬ್ಬ ಸಿಬ್ಬಂದಿಯೂ ಸ್ವಾಗತಿಸಲಿಲ್ಲ. ಅಲ್ಲದೇ, ನಾನು ಹಾಗೂ ಸಚಿವ ಪ್ರಿಯಾಂಕ್ ಅವರು ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಬಹುದು ಎಂಬ ಅರ್ಥದಲ್ಲಿ ಸಂಘಟಕರಿಗೆ ಕುಲಪತಿ ಪತ್ರ ಬರೆದಿದ್ದಾರೆ. ಹೀಗಾಗಿ, ಹಕ್ಕುಚ್ಯುತಿ ಮಂಡನೆಗೆ ಅವಕಾಶ ನೀಡುವಂತೆ ಮನವಿ ಸಲ್ಲಿಸಿದ್ದೇನೆ. ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಸಾಹಿತಿ ಆರ್.ಕೆ. ಹುಡಗಿ, ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ಕೆ. ನೀಲಾ ಅವರ ಸಿದ್ಧಾಂತ ಒಪ್ಪಿಗೆಯಾಗದ್ದಕ್ಕೆ ಕುಲಪತಿ ಇಂತಹ ಕ್ರಮಕ್ಕೆ ಮುಂದಾಗಿದ್ದಾರೆ’ ಎಂದರು.