‘ನನ್ನ ಅವಧಿ ಮುಕ್ತಾಯವಾಗುವ ಮುನ್ನವೇ ಹಂಗಾಮಿ ಕುಲಪತಿ ಪ್ರೊ.ಎಂ.ವಿ. ಅಳಗವಾಡಿ ಅವರು ತಮಗೆ ಅಧಿಕಾರ ಇಲ್ಲದಿದ್ದರೂ ಕರ್ತವ್ಯದಿಂದ ಬಿಡುಗಡೆ ಮಾಡಿ ಮಾತೃ ವಿ.ವಿ.ಗೆ ಹೋಗುವಂತೆ ಒತ್ತಡ ಹೇರಿದ್ದಾರೆ. ಇದು ಕಾನೂನು ಬಾಹಿರ. ಆದೇಶವನ್ನು ತಡೆ ಹಿಡಿಯುವಂತೆ ನಿರ್ದೇಶನ ನೀಡಬೇಕು’ ಎಂದು ಪ್ರೊ. ಪಟೇಲ್ ತಮ್ಮ ವಕೀಲ ಗುರುರಾಜ ಕಕ್ಕೇರಿ ಅವರ ಮೂಲಕ ರಿಟ್ ಅರ್ಜಿ ಸಲ್ಲಿಸಿದ್ದರು.