‘ಮಧ್ಹಾಹ್ನದ ಸಮಯದಲ್ಲಿ ಆರೋಪಿಯನ್ನು ಕರೆತಂದಿದ್ದ ಪೊಲೀಸರು ಠಾಣೆಯ ಹಿಂದಿನ ಕೊಠಡಿಯಲ್ಲಿ ಆತನನ್ನು ಮನಬಂದಂತೆ ಥಳಿಸಿದ್ದಾರೆ. ಪ್ರಜ್ಞೆ ಕಳೆದುಕೊಂಡ ಆತನನ್ನು ನಗರದ ಸೇಡಂ ರಸ್ತೆಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾದ’ ಎಂದು ಮೂಲಗಳು ತಿಳಿಸಿವೆ.
ಈ ಕುರಿತು ‘ಪ್ರಜಾವಾಣಿ’ಗೆ ಸ್ಪಷ್ಟನೆ ನೀಡಿದ ಪೊಲೀಸ್ ಕಮಿಷನರ್ ಡಾ. ವೈ.ಎಸ್. ರವಿಕುಮಾರ್, ‘ಠಾಣೆಯಲ್ಲಿ ವಿಚಾರಣೆಗೆ ಕರೆತಂದಿದ್ದ ವೇಳೆ ಆತನಿಗೆ ಏಕಾಏಕಿ ಅನಾರೋಗ್ಯ ಕಾಣಿಸಿಕೊಂಡಿತು. ಹೀಗಾಗಿ ನಮ್ಮ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿದ್ದರು. ಏನಾಗಿದೆ ಎಂಬುದರ ಮಾಹಿತಿ ಪಡೆಯುತ್ತೇನೆ’ ಎಂದರು.