ಮೇ 13ರಂದು ಶಂಕರ್ ಅವರಿಗೆ ಕರೆ ಬಂದಿತ್ತು. ಮಾತನಾಡಿದ ವ್ಯಕ್ತಿ ತನ್ನ ಹೆಸರು ವಿಜಯಕುಮಾರ ಚೌಬೆ, ಮುಂಬೈ ಕ್ರೈಂ ಬ್ರಾಂಚ್ ಪೊಲೀಸ್ ಇನ್ಸ್ಪೆಕ್ಟರ್ ಎಂದು ಹೇಳಿಕೊಂಡಿದ್ದ. ನಿಮ್ಮ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಾಗಿದೆ. ಜೆಟ್ ಏರ್ವೇಸ್ ಮಾಲೀಕ 256 ಬ್ಯಾಂಕ್ಗಳು ಖಾತೆಗಳನ್ನು ತೆರೆದಿದ್ದಾರೆ. ಅವುಗಳಲ್ಲಿ ನಿಮ್ಮ ಹೆಸರಿನ ಬ್ಯಾಂಕ್ ಖಾತೆಯಿಂದ ಹಣ ಅಕ್ರಮ ವರ್ಗಾವಣೆ ಮಾಡಿಕೊಂಡಿದ್ದಾರೆ. ನೀವು ಅಪರಾಧ ಮಾಡಿಲ್ಲ. ಆದರೆ, ನಿಮ್ಮ ವಿಚಾರಣೆ ಮಾಡಬೇಕಾಗುತ್ತದೆ ಎಂದ ವಂಚಕ, ವಿವಿಧ ಬ್ಯಾಂಕ್ಗಳಲ್ಲಿ ಶಂಕರ್ ಅವರು ಇರಿಸಿದ ಠೇವಣಿಯ ಮಾಹಿತಿ ಕೇಳಿದ ಎಂದು ಪೊಲೀಸರು ತಿಳಿಸಿದ್ದಾರೆ.