ನಗರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸೋಮವಾರ ರಾತ್ರಿ ಸಂಗಮೇಶ್ವರ ಕಾಲೊನಿಯಲ್ಲಿ ನಮ್ಮ ಪಕ್ಷದ ಮುಖಂಡ ಶಿವಾನಂದ ಹುಲಿ ಎಂಬ ವೀರಶೈವ ಸಮಾಜದ ವ್ಯಕ್ತಿ ಪ್ರಚಾರ ಮುಗಿಸಿ ಹೋಗುತ್ತಿದ್ದ ಸಂದರ್ಭದಲ್ಲಿ ಅವರನ್ನು ಬೆನ್ನಟ್ಟಿದ ಕಾಂಗ್ರೆಸ್ ಕಾರ್ಯಕರ್ತರು ಥಳಿಸಿದ್ದಾರೆ. ಇದು ಇಡೀ ವೀರಶೈವ ಲಿಂಗಾಯತ ಸಮಾಜಕ್ಕೆ ಮಾಡಿದ ಅವಮಾನವಾಗಿದೆ’ ಎಂದು ಟೀಕಿಸಿದರು.