ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುನೀತ್ ಮತ್ತೆ ಹುಟ್ಟಿ ಬರಲಿ: ದೇಗುಲದ ಹುಂಡಿಯಲ್ಲಿ ಅಭಿಮಾನಿಯ ಹರಕೆ ಚೀಟಿ

Last Updated 28 ಮಾರ್ಚ್ 2022, 10:35 IST
ಅಕ್ಷರ ಗಾತ್ರ

ಅಫಜಲಪುರ: ದೇವಲ ಗಾಣಗಾಪುರದ ದತ್ತ ಮಹಾರಾಜರ ದೇವಸ್ಥಾನದ ಹುಂಡಿ ಹಣ ಎಣಿಕೆಯ ವೇಳೆ ‘ಪುನೀತ್ ರಾಜ್‌ಕುಮಾರ್ ಸರ್ ಅವರನ್ನು ಮರಳಿ ಕಳುಹಿಸು ಪ್ರಭುವೆ’ ಎಂದು ಪುನೀತ್ ಅಭಿಮಾನಿಯೊಬ್ಬರು ಬರೆದ ಹರಕೆಯ ಚೀಟಿ ದೊರೆತಿದೆ.

ದಿವಂಗತ ಪುನೀತ್ ರಾಜ್‌ಕುಮಾರ್ ಅವರು ಮತ್ತೆ ಕನ್ನಡ ನಾಡಿನಲ್ಲಿ ಜನ್ಮವೆತ್ತಿ ಬರಲಿ ಎಂಬ ಹರಕೆಯ ಚೀಟಿ ಬರೆದು ಹುಂಡಿಗೆ ಹಾಕಿದ್ದು ದೇವಸ್ಥಾನದ ಸಿಬ್ಬಂದಿಯ ಕೈಗೆ ಬರುತ್ತಿದ್ದಂತೆ ಅವರೆಲ್ಲ ಭಾವುಕರಾದರು ಎಂದು ದೇವಸ್ಥಾನ ಸಮಿತಿ ತಿಳಿಸಿದೆ.

₹67.43 ಲಕ್ಷ ಸಂಗ್ರಹ: ‘ದತ್ತ ಮಹಾರಾಜರ ದೇವಸ್ಥಾನದಲ್ಲಿ ಕಳೆದ 4 ತಿಂಗಳಲ್ಲಿ ಭಕ್ತರು ದೇಣಿಗೆಯಾಗಿ ನೀಡಿದ ಹುಂಡಿಯಲ್ಲಿ ₹67.43 ಲಕ್ಷ ನಗದು, 10 ಗ್ರಾಂ. ಚಿನ್ನ ಹಾಗೂ 358 ಗ್ರಾಂ. ಬೆಳ್ಳಿ ಸಂಗ್ರಹವಾಗಿದೆ’ ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ನಾಮದೇವ ರಾಠೋಡ ಹೇಳಿದರು.

ವರ್ಷದಲ್ಲಿ ನಾಲ್ಕು ಬಾರಿ ಹುಂಡಿ ಎಣಿಕೆ ನಡೆಯುತ್ತದೆ. ಕೋವಿಡ್ ಕಾರಣ ಕಳೆದ ವರ್ಷ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಕಡಿಮೆಯಾಗಿತ್ತು. ಈ ವರ್ಷ ಸಂಖ್ಯೆ ಹೆಚ್ಚಾಗಿದ್ದು, ಹುಂಡಿ ಸಂಗ್ರಹ ಕೂಡ ಏರಿಕೆಯಾಗಿದೆ ಎಂದರು.

ಎಣಿಕೆ ಕಾರ್ಯದಲ್ಲಿ ತಹಶೀಲ್ದಾರ್ ಸಂಜುಕುಮಾರ ದಾಸರ, ಜಿಲ್ಲಾಧಿಕಾರಿ ಕಚೇರಿಯ ಶಿರಸ್ತೇದಾರರು ಶಿವಕಾಂತಮ್ಮ, ಗೀತಾ, ಗೌತಮ್ ಗಾಯಕ್ವಾಡ್, ಮಹೇಶ್, ಕಂದಾಯ ನಿರೀಕ್ಷಕರಾದ ಚಂದ್ರಶೇಖರ್, ಬಸವರಾಜ್ ಸಿಂಪಿ, ಸಂಜೀವ್ ಕುಮಾರ್ ಅತ್ತನೂರು, ದೇವಸ್ಥಾನ ಸಿಬ್ಬಂದಿ ದತ್ತು ನಿಂಬರ್ಗಿ, ರಮೇಶ್, ಸಂತೋಷ್ ಮಾಡಿಹಾಳ, ಧನರಾಜ್, ಬ್ಯಾಂಕ್ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT