<p><strong>ಕಲಬುರ್ಗಿ:</strong> ಬಸವಣ್ಣನವರ ನೇತೃತ್ವದಲ್ಲಿ ನಡೆದ ವಚನ ಚಳವಳಿ ಐತಿಹಾಸಿಕ ಮಹತ್ವವುಳ್ಳ ಅಪರೂಪದ ಚಳವಳಿ ಎಂದು ಪತ್ರಕರ್ತ, ಲೇಖಕ ಡಾ. ಶಿವರಂಜನ್ ಸತ್ಯಂಪೇಟೆ ಅಭಿಪ್ರಾಯಪಟ್ಟರು.</p>.<p>ಜಿಲ್ಲಾ ಶರಣ ಸಾಹಿತ್ಯ ಪರಿಷತ್ ವತಿಯಿಂದ ತಾಜಸುಲ್ತಾನಪುರದ ಕೆ.ಎಸ್.ಆರ್.ಪಿ. ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಆಯೋಜಿಸಿದ್ದ ಲಿಂ. ಶಿವಪ್ಪ ವಿರೂಪಾಕ್ಷಪ್ಪ ಅಂಡಗಿ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಕಾಯಕ ಮತ್ತು ದಾಸೋಹ ಕುರಿತು ಮಾತನಾಡಿದರು.</p>.<p>ಶರಣರ ಮಹತ್ವದ ಅನೇಕ ಪರಿಕಲ್ಪನೆಗಳಲ್ಲಿ ಕಾಯಕ–ದಾಸೋಹ ಸಿದ್ಧಾಂತವು ಸಾಮಾಜಿಕ, ಧಾರ್ಮಿಕ ಹಾಗೂ ಆರ್ಥಿಕ ವಕಯಗಳನ್ನು ಒಂದು ಕಟ್ಟಿನಲ್ಲಿ ಸುಭದ್ರವಾಗಿ ಕಟ್ಟಬಲ್ಲ ತತ್ವ ಇದೆ ಎಂದು ತಿಳಿಸಿದರು.</p>.<p>ಕೆಲಸಕ್ಕೆ ಕಾಯಕ, ದಾನಕ್ಕೆ ದಾಸೋಹದ ಸ್ಪರ್ಶ ನೀಡಿದ ಶರಣರು, ಸದೃಢ–ಸ್ವಾವಲಂಬಿ ಸಮಾಜದ ನಿರ್ಮಾತೃಗಳಾಗಿದ್ದಾರೆ. ಕಲ್ಯಾಣ ನಾಡಿನ ಕನಸು ಕಂಡಿದ್ದ ಶರಣರು ಸಮಾಜದ ಏಳ್ಗೆಗೆ ಶ್ರಮಿಸಿದವರು ಎಂದರು.</p>.<p>ಮುಖ್ಯ ಅತಿಥಿಯಾಗಿದ್ದ ಕೆಎಸ್ಆರ್ಪಿ 6ನೇ ಬಟಾಲಿಯನ್ ಕಮಾಂಡೆಂಟ್ ಬಸವರಾಜ ಜಿಳ್ಳೆ ಮಾತನಾಡಿ, ಮನದ ಮಲಿನತೆಯನ್ನು ತೊಳೆದ ಶರಣರ ವಚನಗಳಲ್ಲಿ ಸನ್ನಡತೆ, ಸದಾಚಾರ ಮುಂತಾದ ವ್ಯಕ್ತಿತ್ವ ವಿಕಸನದ ಅಂಶಗಳಿವೆ. ವಿದ್ಯಾರ್ಥಿಗಳು ಮೊಬೈಲ್ ಗೀಳು ಬಿಟ್ಟು ಓದು, ಬರಹದಲ್ಲಿ ತೊಡಗಬೇಕು ಎಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯಗುರು ಡಾ. ರಾಜಕುಮಾರ ಪಾಟೀಲ ಮಾತನಾಡಿ, ಮನುಷ್ಯ ತನ್ನ ಬದುಕಿನಲ್ಲಿ ಏನಾದರೊಂದು ಮಹತ್ವದ್ದನ್ನು ಸಾಧಿಸಬೇಕಾದರೆ, ವಚನ ಸಾಹಿತ್ಯ ತುಂಬ ಸಹಕಾರಿಯಾಗಿದೆ. ಯುವಜನರ ಮನಸ್ಸು ಪರಿವರ್ತನೆಗೆ ತೆರೆದುಕೊಳ್ಳಬೇಕು ಎಂದರು.</p>.<p>ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರೊ. ಕುಪೇಂದ್ರ ಪಾಟೀಲ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಡಾ. ಶರಣಬಸಪ್ಪ ವಡ್ಡನಕೇರಿ ನಿರೂಪಿಸಿದರು. ದತ್ತಿ ದಾಸೋಹಿ ಹಾಗೂ ಶರಣ ಸಾಹಿತ್ಯ ಪರಿಷತ್ ಯುವ ಘಟಕದ ಅಧ್ಯಕ್ಷ ಶಿವರಾಜ ಅಂಡಗಿ ಸ್ವಾಗತಿಸಿದರು. ವಿನೋದ ಜೇನವೆರಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ಬಸವಣ್ಣನವರ ನೇತೃತ್ವದಲ್ಲಿ ನಡೆದ ವಚನ ಚಳವಳಿ ಐತಿಹಾಸಿಕ ಮಹತ್ವವುಳ್ಳ ಅಪರೂಪದ ಚಳವಳಿ ಎಂದು ಪತ್ರಕರ್ತ, ಲೇಖಕ ಡಾ. ಶಿವರಂಜನ್ ಸತ್ಯಂಪೇಟೆ ಅಭಿಪ್ರಾಯಪಟ್ಟರು.</p>.<p>ಜಿಲ್ಲಾ ಶರಣ ಸಾಹಿತ್ಯ ಪರಿಷತ್ ವತಿಯಿಂದ ತಾಜಸುಲ್ತಾನಪುರದ ಕೆ.ಎಸ್.ಆರ್.ಪಿ. ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಆಯೋಜಿಸಿದ್ದ ಲಿಂ. ಶಿವಪ್ಪ ವಿರೂಪಾಕ್ಷಪ್ಪ ಅಂಡಗಿ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಕಾಯಕ ಮತ್ತು ದಾಸೋಹ ಕುರಿತು ಮಾತನಾಡಿದರು.</p>.<p>ಶರಣರ ಮಹತ್ವದ ಅನೇಕ ಪರಿಕಲ್ಪನೆಗಳಲ್ಲಿ ಕಾಯಕ–ದಾಸೋಹ ಸಿದ್ಧಾಂತವು ಸಾಮಾಜಿಕ, ಧಾರ್ಮಿಕ ಹಾಗೂ ಆರ್ಥಿಕ ವಕಯಗಳನ್ನು ಒಂದು ಕಟ್ಟಿನಲ್ಲಿ ಸುಭದ್ರವಾಗಿ ಕಟ್ಟಬಲ್ಲ ತತ್ವ ಇದೆ ಎಂದು ತಿಳಿಸಿದರು.</p>.<p>ಕೆಲಸಕ್ಕೆ ಕಾಯಕ, ದಾನಕ್ಕೆ ದಾಸೋಹದ ಸ್ಪರ್ಶ ನೀಡಿದ ಶರಣರು, ಸದೃಢ–ಸ್ವಾವಲಂಬಿ ಸಮಾಜದ ನಿರ್ಮಾತೃಗಳಾಗಿದ್ದಾರೆ. ಕಲ್ಯಾಣ ನಾಡಿನ ಕನಸು ಕಂಡಿದ್ದ ಶರಣರು ಸಮಾಜದ ಏಳ್ಗೆಗೆ ಶ್ರಮಿಸಿದವರು ಎಂದರು.</p>.<p>ಮುಖ್ಯ ಅತಿಥಿಯಾಗಿದ್ದ ಕೆಎಸ್ಆರ್ಪಿ 6ನೇ ಬಟಾಲಿಯನ್ ಕಮಾಂಡೆಂಟ್ ಬಸವರಾಜ ಜಿಳ್ಳೆ ಮಾತನಾಡಿ, ಮನದ ಮಲಿನತೆಯನ್ನು ತೊಳೆದ ಶರಣರ ವಚನಗಳಲ್ಲಿ ಸನ್ನಡತೆ, ಸದಾಚಾರ ಮುಂತಾದ ವ್ಯಕ್ತಿತ್ವ ವಿಕಸನದ ಅಂಶಗಳಿವೆ. ವಿದ್ಯಾರ್ಥಿಗಳು ಮೊಬೈಲ್ ಗೀಳು ಬಿಟ್ಟು ಓದು, ಬರಹದಲ್ಲಿ ತೊಡಗಬೇಕು ಎಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯಗುರು ಡಾ. ರಾಜಕುಮಾರ ಪಾಟೀಲ ಮಾತನಾಡಿ, ಮನುಷ್ಯ ತನ್ನ ಬದುಕಿನಲ್ಲಿ ಏನಾದರೊಂದು ಮಹತ್ವದ್ದನ್ನು ಸಾಧಿಸಬೇಕಾದರೆ, ವಚನ ಸಾಹಿತ್ಯ ತುಂಬ ಸಹಕಾರಿಯಾಗಿದೆ. ಯುವಜನರ ಮನಸ್ಸು ಪರಿವರ್ತನೆಗೆ ತೆರೆದುಕೊಳ್ಳಬೇಕು ಎಂದರು.</p>.<p>ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರೊ. ಕುಪೇಂದ್ರ ಪಾಟೀಲ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಡಾ. ಶರಣಬಸಪ್ಪ ವಡ್ಡನಕೇರಿ ನಿರೂಪಿಸಿದರು. ದತ್ತಿ ದಾಸೋಹಿ ಹಾಗೂ ಶರಣ ಸಾಹಿತ್ಯ ಪರಿಷತ್ ಯುವ ಘಟಕದ ಅಧ್ಯಕ್ಷ ಶಿವರಾಜ ಅಂಡಗಿ ಸ್ವಾಗತಿಸಿದರು. ವಿನೋದ ಜೇನವೆರಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>