<p><strong>ಕಲಬುರಗಿ:</strong> ‘ಪತ್ರಕರ್ತರು ನಕಾರಾತ್ಮಕ ಸಂಗತಿಗಳನ್ನು ವೈಭವೀಕರಿಸುವ ಬದಲು ಜನರಿಗೆ ಪ್ರಯೋಜನವಾಗುವ, ಸ್ಪೂರ್ತಿಗೊಳಿಸುವ ಸಕಾರಾತ್ಮಕ ಸಂಗತಿಗಳನ್ನು ಪ್ರಕಟಿಸುವತ್ತ ಹೆಚ್ಚು ಗಮನ ಹರಿಸಬೇಕು’ ಎಂದು ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಸಲಹೆ ನೀಡಿದರು.</p>.<p>ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಮಂಗಳವಾರ ಆಯೋಜಿಸಿದ್ದ ನೂತನ ಪದಾಧಿಕಾರಿಗಳ ಪ್ರತಿಜ್ಞಾ ವಿಧಿ ಸ್ವೀಕಾರ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಇಸ್ರೇಲ್ ದೇಶದಲ್ಲಿ ನಿತ್ಯವೂ ಬಾಂಬ್ ಸ್ಫೋಟವಾಗುತ್ತಲೇ ಇರುತ್ತದೆ. ಆದರೆ, ಆ ಸುದ್ದಿಯನ್ನು ಪ್ರಧಾನವಾಗಿ ಪ್ರಕಟಿಸುವ ಬದಲು ರೈತರ ಯಶೋಗಾಥೆಗಳಂತಹ ಸಕಾರಾತ್ಮಕ ಸುದ್ದಿಗಳನ್ನು ಪ್ರಕಟಿಸುತ್ತಾರೆ. ಅಂತಹ ಸುದ್ದಿಗಳು ಇಲ್ಲಿಯೂ ಪ್ರಕಟವಾಗಬೇಕು’ ಎಂದು ಸಲಹೆ ನೀಡಿದರು.</p>.<p>‘ಪತ್ರಕರ್ತರ ಸಂಘ ಹಾಗೂ ಪತ್ರಕರ್ತರ ಶ್ರೇಯೋಭಿವೃದ್ಧಿಗೆ ನೆರವು ನೀಡಲು ಜಿಲ್ಲಾಡಳಿತ ಸಿದ್ಧವಾಗಿದೆ. ಸಂಘದ ಸದಸ್ಯರು ಬಯಸಿದರೆ ಈಜುಕೊಳ ಬಳಕೆ ಪಾಸ್ ನೀಡಲು ಸಿದ್ಧ’ ಎಂದರು.</p>.<p>ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಿವಾನಂದ ತಗಡೂರ ಮಾತನಾಡಿ, ‘ಚುನಾವಣೆ ನಡೆಯುವವರೆಗೂ ಎರಡು ಗುಂಪುಗಳು ಇರುವುದು ಸಹಜ. ಆ ನಂತರ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಪತ್ರಕರ್ತರ ಭವನವನ್ನು ವಾರ್ತಾ ಇಲಾಖೆ ಕೆಲ ಕಾಲ ತನ್ನ ಸುಪರ್ದಿಗೆ ಪಡೆದರೂ ಅಲ್ಲಿನ ಫಲಕವನ್ನು ತೆರವುಗೊಳಿಸಬಾರದಿತ್ತು’ ಎಂದರು.</p>.<p>ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಾಬುರಾವ ಯಡ್ರಾಮಿ ಮಾತನಾಡಿ, ‘ಪತ್ರಿಕಾ ಭವನದಲ್ಲಿ ಕೆಲವೇ ದಿನಗಳಲ್ಲಿ ಗ್ರಂಥಾಲಯ ಆರಂಭಗೊಳ್ಳಲಿದ್ದು, ಪತ್ರಕರ್ತರ ದೈಹಿಕ ಚಟುವಟಿಕೆಗಾಗಿ ಕ್ರೀಡಾ ಪರಿಕರ ಇರಿಸಲಾಗುವುದು’ ಎಂದರು.</p>.<p>ಕಲಬುರಗಿ ಪೊಲೀಸ್ ಕಮಿಷನರ್ ಡಾ.ವೈ.ಎಸ್. ರವಿಕುಮಾರ್, ಮಾಧ್ಯಮ ಅಕಾಡೆಮಿ ಸದಸ್ಯ ದೇವಿಂದ್ರಪ್ಪ ಕಪನೂರ, ಸಂಘದ ರಾಜ್ಯ ಉಪಾಧ್ಯಕ್ಷ ಭವಾನಿಸಿಂಗ್ ಠಾಕೂರ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶಿವರಂಜನ್ ಸತ್ಯಂಪೇಟೆ, ಸಂಘದ ಪ್ರಧಾನ ಕಾರ್ಯದರ್ಶಿ ಸಂಗಮನಾಥ ರೇವತಗಾಂವ, ಖಜಾಂಚಿ ಅಶೋಕ ಕಪನೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ‘ಪತ್ರಕರ್ತರು ನಕಾರಾತ್ಮಕ ಸಂಗತಿಗಳನ್ನು ವೈಭವೀಕರಿಸುವ ಬದಲು ಜನರಿಗೆ ಪ್ರಯೋಜನವಾಗುವ, ಸ್ಪೂರ್ತಿಗೊಳಿಸುವ ಸಕಾರಾತ್ಮಕ ಸಂಗತಿಗಳನ್ನು ಪ್ರಕಟಿಸುವತ್ತ ಹೆಚ್ಚು ಗಮನ ಹರಿಸಬೇಕು’ ಎಂದು ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಸಲಹೆ ನೀಡಿದರು.</p>.<p>ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಮಂಗಳವಾರ ಆಯೋಜಿಸಿದ್ದ ನೂತನ ಪದಾಧಿಕಾರಿಗಳ ಪ್ರತಿಜ್ಞಾ ವಿಧಿ ಸ್ವೀಕಾರ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಇಸ್ರೇಲ್ ದೇಶದಲ್ಲಿ ನಿತ್ಯವೂ ಬಾಂಬ್ ಸ್ಫೋಟವಾಗುತ್ತಲೇ ಇರುತ್ತದೆ. ಆದರೆ, ಆ ಸುದ್ದಿಯನ್ನು ಪ್ರಧಾನವಾಗಿ ಪ್ರಕಟಿಸುವ ಬದಲು ರೈತರ ಯಶೋಗಾಥೆಗಳಂತಹ ಸಕಾರಾತ್ಮಕ ಸುದ್ದಿಗಳನ್ನು ಪ್ರಕಟಿಸುತ್ತಾರೆ. ಅಂತಹ ಸುದ್ದಿಗಳು ಇಲ್ಲಿಯೂ ಪ್ರಕಟವಾಗಬೇಕು’ ಎಂದು ಸಲಹೆ ನೀಡಿದರು.</p>.<p>‘ಪತ್ರಕರ್ತರ ಸಂಘ ಹಾಗೂ ಪತ್ರಕರ್ತರ ಶ್ರೇಯೋಭಿವೃದ್ಧಿಗೆ ನೆರವು ನೀಡಲು ಜಿಲ್ಲಾಡಳಿತ ಸಿದ್ಧವಾಗಿದೆ. ಸಂಘದ ಸದಸ್ಯರು ಬಯಸಿದರೆ ಈಜುಕೊಳ ಬಳಕೆ ಪಾಸ್ ನೀಡಲು ಸಿದ್ಧ’ ಎಂದರು.</p>.<p>ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಿವಾನಂದ ತಗಡೂರ ಮಾತನಾಡಿ, ‘ಚುನಾವಣೆ ನಡೆಯುವವರೆಗೂ ಎರಡು ಗುಂಪುಗಳು ಇರುವುದು ಸಹಜ. ಆ ನಂತರ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಪತ್ರಕರ್ತರ ಭವನವನ್ನು ವಾರ್ತಾ ಇಲಾಖೆ ಕೆಲ ಕಾಲ ತನ್ನ ಸುಪರ್ದಿಗೆ ಪಡೆದರೂ ಅಲ್ಲಿನ ಫಲಕವನ್ನು ತೆರವುಗೊಳಿಸಬಾರದಿತ್ತು’ ಎಂದರು.</p>.<p>ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಾಬುರಾವ ಯಡ್ರಾಮಿ ಮಾತನಾಡಿ, ‘ಪತ್ರಿಕಾ ಭವನದಲ್ಲಿ ಕೆಲವೇ ದಿನಗಳಲ್ಲಿ ಗ್ರಂಥಾಲಯ ಆರಂಭಗೊಳ್ಳಲಿದ್ದು, ಪತ್ರಕರ್ತರ ದೈಹಿಕ ಚಟುವಟಿಕೆಗಾಗಿ ಕ್ರೀಡಾ ಪರಿಕರ ಇರಿಸಲಾಗುವುದು’ ಎಂದರು.</p>.<p>ಕಲಬುರಗಿ ಪೊಲೀಸ್ ಕಮಿಷನರ್ ಡಾ.ವೈ.ಎಸ್. ರವಿಕುಮಾರ್, ಮಾಧ್ಯಮ ಅಕಾಡೆಮಿ ಸದಸ್ಯ ದೇವಿಂದ್ರಪ್ಪ ಕಪನೂರ, ಸಂಘದ ರಾಜ್ಯ ಉಪಾಧ್ಯಕ್ಷ ಭವಾನಿಸಿಂಗ್ ಠಾಕೂರ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶಿವರಂಜನ್ ಸತ್ಯಂಪೇಟೆ, ಸಂಘದ ಪ್ರಧಾನ ಕಾರ್ಯದರ್ಶಿ ಸಂಗಮನಾಥ ರೇವತಗಾಂವ, ಖಜಾಂಚಿ ಅಶೋಕ ಕಪನೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>