<p><strong>ಅಫಜಲಪುರ (ಕಲಬುರಗಿ ಜಿಲ್ಲೆ):</strong>"ಜಿಲ್ಲಾಧಿಕಾರಿ ನಡೆ-ಹಳ್ಳಿಯ ಕಡೆ" ಕಾರ್ಯಕ್ರಮದ ಅಂಗವಾಗಿ, ಶನಿವಾರ ಅಫಜಲಪುರ ತಾಲ್ಲೂಕಿನ ಅತನೂರಗೆ ಬಂದ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಜನರ ಕುಂದು- ಕೊರತೆ ಆಲಿಸಿದರು.</p>.<p>ಅತನೂರ ಹಾಗೂ ಈ ಪಂಚಾಯಿತಿ ವ್ಯಾಪ್ತಿಗೆ ಬರುವ ಹಳ್ಳಿಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದ ಮಹಿಳೆಯರು ಕೂಡ ಸರದಿಯಲ್ಲಿ ನಿಂತು ಮನವಿ ಸಲ್ಲಿಸಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದಿಲೀಷ್ ಶಶಿ, ಉಪವಿಭಾಗಾಧಿಕಾರಿ ಮೋನಾ ರೋಟ್, ಅಫಜಲಪುರ ತಹಶೀಲ್ದಾರ್ ಸಂಜೀವಕುಮಾರ ದಾಸರ, ಡಿ.ಡಿ.ಎಲ್.ಅರ್. ಶಂಕರ್, ಗ್ರಾಮ ಪಂಚಾಯಿತಿ ಅದ್ಯಕ್ಷೆ ಪಾರ್ವತಿ ಜಗನ್ನಾಥ ಗೊಳಸಾರ ಕೂಡ ಪಾಲ್ಕೊಂಡರು.</p>.<p>ಇದಕ್ಕೂ ಮುನ್ನ ಗ್ರಾಮದ ಮಹಿಳೆಯರು ಅಧಿಕಾರಿಗಳಿಗೆ ತಿಲಕವಿಟ್ಟು, ಕುಂಭ ಕಳಸದೊಂದಿಗೆ ಸಾಂಪ್ರದಾಯಿಕವಾಗಿ ಬರಮಾಡಿಕೊಂಡರು. ಪುರುಷರು ಡಿ.ಸಿ. ಮತ್ತು ಸಿ.ಇ.ಒ ಅವರನ್ನು ಆಲಂಕೃತ ಎತ್ತಿನ ಚಕ್ಕಡಿಯಲ್ಲಿ ಮೆರವಣಿಗೆ ಮೂಲಕ ವೇದಿಕೆ ಸ್ಥಳಕ್ಕೆ ಕರೆತಂದರು.</p>.<p>ವೇದಿಕೆ ಸ್ಥಳಕ್ಕೆ ಬರುವ ಮುನ್ನ ಅಧಿಕಾರಿಗಳು ಬಸವೇಶ್ವರ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆದರು. ಈ ಸಂದರ್ಭದಲ್ಲಿ ಅತನೂರ ಮಠದ ಅಭಿನವ ಗುರುಬಸವ ಶಿವಚಾರ್ಯರು ಅಧಿಕಾರಿಗಳನ್ನು ಸನ್ಮಾನಿಸಿದರು.</p>.<p>ಗ್ರಾಮ ವಾಸ್ತವ್ಯ ಅಂಗವಾಗಿ ಆರೋಗ್ಯ ಇಲಾಖೆಯಿಂದ ಆಯೋಜಿಸಿದ ಅರೋಗ್ಯ ಶಿಬಿರಕ್ಕೆ ಭೇಟಿ ಮಾಡಿ ಕೋವಿಡ್ ಲಸಿಕೆ ಕಾರ್ಯ ವೀಕ್ಷಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಫಜಲಪುರ (ಕಲಬುರಗಿ ಜಿಲ್ಲೆ):</strong>"ಜಿಲ್ಲಾಧಿಕಾರಿ ನಡೆ-ಹಳ್ಳಿಯ ಕಡೆ" ಕಾರ್ಯಕ್ರಮದ ಅಂಗವಾಗಿ, ಶನಿವಾರ ಅಫಜಲಪುರ ತಾಲ್ಲೂಕಿನ ಅತನೂರಗೆ ಬಂದ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಜನರ ಕುಂದು- ಕೊರತೆ ಆಲಿಸಿದರು.</p>.<p>ಅತನೂರ ಹಾಗೂ ಈ ಪಂಚಾಯಿತಿ ವ್ಯಾಪ್ತಿಗೆ ಬರುವ ಹಳ್ಳಿಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದ ಮಹಿಳೆಯರು ಕೂಡ ಸರದಿಯಲ್ಲಿ ನಿಂತು ಮನವಿ ಸಲ್ಲಿಸಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದಿಲೀಷ್ ಶಶಿ, ಉಪವಿಭಾಗಾಧಿಕಾರಿ ಮೋನಾ ರೋಟ್, ಅಫಜಲಪುರ ತಹಶೀಲ್ದಾರ್ ಸಂಜೀವಕುಮಾರ ದಾಸರ, ಡಿ.ಡಿ.ಎಲ್.ಅರ್. ಶಂಕರ್, ಗ್ರಾಮ ಪಂಚಾಯಿತಿ ಅದ್ಯಕ್ಷೆ ಪಾರ್ವತಿ ಜಗನ್ನಾಥ ಗೊಳಸಾರ ಕೂಡ ಪಾಲ್ಕೊಂಡರು.</p>.<p>ಇದಕ್ಕೂ ಮುನ್ನ ಗ್ರಾಮದ ಮಹಿಳೆಯರು ಅಧಿಕಾರಿಗಳಿಗೆ ತಿಲಕವಿಟ್ಟು, ಕುಂಭ ಕಳಸದೊಂದಿಗೆ ಸಾಂಪ್ರದಾಯಿಕವಾಗಿ ಬರಮಾಡಿಕೊಂಡರು. ಪುರುಷರು ಡಿ.ಸಿ. ಮತ್ತು ಸಿ.ಇ.ಒ ಅವರನ್ನು ಆಲಂಕೃತ ಎತ್ತಿನ ಚಕ್ಕಡಿಯಲ್ಲಿ ಮೆರವಣಿಗೆ ಮೂಲಕ ವೇದಿಕೆ ಸ್ಥಳಕ್ಕೆ ಕರೆತಂದರು.</p>.<p>ವೇದಿಕೆ ಸ್ಥಳಕ್ಕೆ ಬರುವ ಮುನ್ನ ಅಧಿಕಾರಿಗಳು ಬಸವೇಶ್ವರ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆದರು. ಈ ಸಂದರ್ಭದಲ್ಲಿ ಅತನೂರ ಮಠದ ಅಭಿನವ ಗುರುಬಸವ ಶಿವಚಾರ್ಯರು ಅಧಿಕಾರಿಗಳನ್ನು ಸನ್ಮಾನಿಸಿದರು.</p>.<p>ಗ್ರಾಮ ವಾಸ್ತವ್ಯ ಅಂಗವಾಗಿ ಆರೋಗ್ಯ ಇಲಾಖೆಯಿಂದ ಆಯೋಜಿಸಿದ ಅರೋಗ್ಯ ಶಿಬಿರಕ್ಕೆ ಭೇಟಿ ಮಾಡಿ ಕೋವಿಡ್ ಲಸಿಕೆ ಕಾರ್ಯ ವೀಕ್ಷಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>