ಇದೇ ವೇಳೆ ಜೆಡಿಎಸ್ ಮುಖಂಡ ಬಾಲರಾಜ್ ಗುತ್ತೇದಾರ, ಸೇಡಂ ತಾಲ್ಲೂಕಿನ ವಿದ್ಯುತ್ ಸಮಸ್ಯೆ, ಸಾಮೂಹಿಕ ಶೌಚಾಲಯ, ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆ, ಶಾಲಾ ಕಟ್ಟಡಗಳು ಬಿರುಕು ಬಿಟ್ಟಿವೆ ಸೇರಿದಂತೆ ಅನೇಕ ಸಮಸ್ಯೆಗಳಿದ್ದು ಇತ್ಯರ್ಥಪಡಿಸಬೇಕು ಎಂದು ಮನವಿ ಮಾಡಿದರು. ತಾಲ್ಲೂಕಿನ ಆಡಕಿ, ಮಾದ್ವಾರ ಗ್ರಾಮದ ಸೇತುವೆ ಕಳಪೆ ಕಾಮಗಾರಿಯಿಂದ ಕೂಡಿದೆ’ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮುಕ್ರಂಖಾನ್ ಜಿಲ್ಲಾಧಿಕಾರಿಗೆ ಮನವಿ ಮಾಡಿದರು.