ಬೆಳೆ ಕಟಾವು ಆಧಾರದ ಮೇಲೆ ಮುಂಗಾರು ಬೆಳೆಗಳಾದ ಹೆಸರು, ಉದ್ದು, ಸೋಯಾಬೀನ್ ಹಾಗೂ ತೊಗರಿ ಬೆಳೆಗಳಿಗೆ ಜಿಲ್ಲೆಯ 69,829 ರೈತರ ಬ್ಯಾಂಕ್ ಖಾತೆಗೆ ₹ 94.558 ಕೋಟಿ, ಸ್ಥಳೀಯ ಪ್ರಕೃತಿ ವಿಕೋಪದಡಿ 18,433 ರೈತರ ಬ್ಯಾಂಕ್ ಖಾತೆಗೆ ₹ 6.24 ಕೋಟಿ ವಿಮೆ ಮೊತ್ತ ಹಾಗೂ ಬೆಳೆ ರಾಶಿ ಸಂದರ್ಭದಲ್ಲಿ ಆಗುವ ಹಾನಿ ಘಟಕದಡಿ 382 ರೈತರ ಬ್ಯಾಂಕ್ ಖಾತೆಗೆ ₹ 81.92 ಲಕ್ಷ ವಿಮೆ ಮೊತ್ತ ಪಾವತಿಸಲಾಗಿದೆ. ಹೀಗೆ ಒಟ್ಟು 88,644 ರೈತರ ಬ್ಯಾಂಕ್ ಖಾತೆಗೆ 101.61 ಕೋಟಿ ಬೆಳೆ ವಿಮೆ ಪರಿಹಾರ ಮಂಜೂರು ಮಾಡಲಾಗಿದೆ. ಪರಿಹಾರ ಹಣ ಖಾತೆಗೆ ಜಮೆ ಪ್ರಕ್ರಿಯೆ ಕಳೆದೆರಡು ದಿನಗಳಿಂದ ನಿರಂತರ ನಡೆಯುತ್ತಿದ್ದು, ಒಂದೆರಡು ದಿನದಲ್ಲಿ ಉಳಿದ ರೈತರ ಖಾತೆಗೂ ಹಣ ಜಮೆಯಾಗಲಿದೆ ಎಂದಿದ್ದಾರೆ.