<p>ಕಲಬುರ್ಗಿ: ‘ಶಹಾಬಾದ್ ಇಎಸ್ಐಸಿ ಆಸ್ಪತ್ರೆಯಲ್ಲಿ ಗ್ಯಾಸ್ ಪೈಪ್ಲೈನ್ ಸೇರಿದಂತೆ ಬಹುತೇಕ ಕಾರ್ಯ ಪೂರ್ಣಗೊಂಡಿದ್ದು ಪ್ರಾಯೋಗಿಕವಾಗಿ ಕಾರ್ಯಾಚರಣೆ ಆರಂಭಿಸಬೇಕು’ ಎಂದು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಸೂಚನೆ ನೀಡಿದರು.</p>.<p>ಶಹಾಬಾದ್ನಲ್ಲಿ ನವೀಕರಿಸಲಾದ ಇಎಸ್ಐಸಿ ಆಸ್ಪತ್ರೆಯನ್ನು ಬುಧವಾರ ಪರಿಶೀಲಿಸಿ ಮಾತನಾಡಿದ ಅವರು, ‘ಆಸ್ಪತ್ರೆಗೆ ಬೇಕಾಗುವ ವೈದ್ಯಕೀಯ ಉಪಕರಣಗಳು, ಪೀಠೋಪಕರಣಗಳ ಇಂಡೆಂಟ್ ಸಲ್ಲಿಸಬೇಕು. ಅದರ ಜೊತೆಗೆ ಅಸ್ಪತ್ರೆಗೆ ಅಗತ್ಯವಿರುವ ವೈದ್ಯಕೀಯ ಮತ್ತು ವೈದ್ಯಕೀಯೇತರ ಸಿಬ್ಬಂದಿಯ ವಿವರ ಸಹ ನೀಡಬೇಕು’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅಮರದೀಪ ಪವಾರ ಅವರಿಗೆ ಸೂಚನೆ ನೀಡಿದರು.</p>.<p>ಕಾಮಗಾರಿ ಪ್ರಗತಿ ಕುರಿತು ಮಾಹಿತಿ ನೀಡಬೇಕು. ತ್ವರಿತಗತಿಯಲ್ಲಿ ಕಾರ್ಯಗಳು ನಡೆಯಬೇಕು ಎಂದು ಅವರು ತಿಳಿಸಿದರು.</p>.<p>‘ನೀರು, ವಿದ್ಯುತ್ ವ್ಯವಸ್ಥೆ ಸೇರಿದಂತೆ ರಿದಂತೆ ಬಹುತೇಕ ಸಿವಿಲ್ ಕಾಮಗಾರಿ ಪೂರ್ಣಗೊಂಡಿವೆ’ ಎಂದು ಸೇಡಂ ಉಪವಿಭಾಗದ ಲೊಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಕೃಷ್ಣ ಅಗ್ನಿಹೋತ್ರಿ ವಿವರಿಸಿದರು.</p>.<p>ತಹಶೀಲ್ದಾರ್ ಸುರೇಶ ವರ್ಮಾ, ನಗರಸಭೆಯ ಆಯುಕ್ತ ಕೆ.ಗುರುಲಿಂಗಪ್ಪ, ಲೊಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅಣ್ಣಪ್ಪ ಕುದ್ರಿ, ಸಹಾಯಕ ಎಂಜಿನಿಯರ್ಜಗನ್ನಾಥ ಮಾಳಗೆ ಮತ್ತು ಇತರ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರ್ಗಿ: ‘ಶಹಾಬಾದ್ ಇಎಸ್ಐಸಿ ಆಸ್ಪತ್ರೆಯಲ್ಲಿ ಗ್ಯಾಸ್ ಪೈಪ್ಲೈನ್ ಸೇರಿದಂತೆ ಬಹುತೇಕ ಕಾರ್ಯ ಪೂರ್ಣಗೊಂಡಿದ್ದು ಪ್ರಾಯೋಗಿಕವಾಗಿ ಕಾರ್ಯಾಚರಣೆ ಆರಂಭಿಸಬೇಕು’ ಎಂದು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಸೂಚನೆ ನೀಡಿದರು.</p>.<p>ಶಹಾಬಾದ್ನಲ್ಲಿ ನವೀಕರಿಸಲಾದ ಇಎಸ್ಐಸಿ ಆಸ್ಪತ್ರೆಯನ್ನು ಬುಧವಾರ ಪರಿಶೀಲಿಸಿ ಮಾತನಾಡಿದ ಅವರು, ‘ಆಸ್ಪತ್ರೆಗೆ ಬೇಕಾಗುವ ವೈದ್ಯಕೀಯ ಉಪಕರಣಗಳು, ಪೀಠೋಪಕರಣಗಳ ಇಂಡೆಂಟ್ ಸಲ್ಲಿಸಬೇಕು. ಅದರ ಜೊತೆಗೆ ಅಸ್ಪತ್ರೆಗೆ ಅಗತ್ಯವಿರುವ ವೈದ್ಯಕೀಯ ಮತ್ತು ವೈದ್ಯಕೀಯೇತರ ಸಿಬ್ಬಂದಿಯ ವಿವರ ಸಹ ನೀಡಬೇಕು’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅಮರದೀಪ ಪವಾರ ಅವರಿಗೆ ಸೂಚನೆ ನೀಡಿದರು.</p>.<p>ಕಾಮಗಾರಿ ಪ್ರಗತಿ ಕುರಿತು ಮಾಹಿತಿ ನೀಡಬೇಕು. ತ್ವರಿತಗತಿಯಲ್ಲಿ ಕಾರ್ಯಗಳು ನಡೆಯಬೇಕು ಎಂದು ಅವರು ತಿಳಿಸಿದರು.</p>.<p>‘ನೀರು, ವಿದ್ಯುತ್ ವ್ಯವಸ್ಥೆ ಸೇರಿದಂತೆ ರಿದಂತೆ ಬಹುತೇಕ ಸಿವಿಲ್ ಕಾಮಗಾರಿ ಪೂರ್ಣಗೊಂಡಿವೆ’ ಎಂದು ಸೇಡಂ ಉಪವಿಭಾಗದ ಲೊಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಕೃಷ್ಣ ಅಗ್ನಿಹೋತ್ರಿ ವಿವರಿಸಿದರು.</p>.<p>ತಹಶೀಲ್ದಾರ್ ಸುರೇಶ ವರ್ಮಾ, ನಗರಸಭೆಯ ಆಯುಕ್ತ ಕೆ.ಗುರುಲಿಂಗಪ್ಪ, ಲೊಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅಣ್ಣಪ್ಪ ಕುದ್ರಿ, ಸಹಾಯಕ ಎಂಜಿನಿಯರ್ಜಗನ್ನಾಥ ಮಾಳಗೆ ಮತ್ತು ಇತರ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>