<p><strong>ಕಲಬುರ್ಗಿ: </strong>ಆಂಧ್ರಪ್ರದೇಶಕ್ಕೆ ಶೀಘ್ರವೇ ಬಸ್ ಸಂಚಾರ ಶುರುವಾಗಲಿದ್ದು, ಮುಂದಿನ ಒಂದು ವಾರದಲ್ಲಿ ತಮಿಳುನಾಡು, ಕೇರಳ, ತೆಲಂಗಾಣ ಹಾಗೂ ಗೋವಾ ರಾಜ್ಯಗಳಿಗೆ ಸಾರಿಗೆ ಸಂಸ್ಥೆಯ ಬಸ್ ಸಂಚಾರ ಆರಂಭಿಸಲಾಗುವುದು ಎಂದು ಸಾರಿಗೆ ಸಚಿವರೂ ಆದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪ್ರಕಟಿಸಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಹೊರತುಪಡಿಸಿ ಎಲ್ಲ ನೆರೆಯ ರಾಜ್ಯಗಳಿಗೆ ಪತ್ರ ಬರೆಯಲಾಗಿದೆ. ಈಗ ನೆರೆಯ ಆಂಧ್ರಪ್ರದೇಶ ಒಪ್ಪಿಗೆ ನೀಡಿದೆ. ಹೀಗಾಗಿ ಎರಡು–ಮೂರು ದಿನದೊಳಗೆ ಬಸ್ ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.</p>.<p>ನೆರೆಯ ರಾಜ್ಯಗಳಾದ ತಮಿಳುನಾಡು, ಪುದುಚೇರಿ, ಕೇರಳ, ತೆಲಂಗಾಣ ಸಾರಿಗೆ ಸಚಿವರಿಗೆ ಪತ್ರ ಬರೆಯಲಾಗಿದೆ. ಈಗ ಆಂಧ್ರಪ್ರದೇಶ ತನ್ನ ಒಪ್ಪಿಗೆ ನೀಡಿದೆ. ಅಧಿಕಾರಿಗಳೊಂದಿಗೆ ಚರ್ಚಿಸಿ ಬಸ್ ಸಂಚಾರ ಶುರು ಮಾಡಲಾಗುವುದು ಎಂದು ವಿವರಿಸಿದರು.</p>.<p>ಸಾರಿಗೆ ಸಂಸ್ಥೆಯ ಬಸ್ಗಳಲ್ಲಿ ನಿತ್ಯ ಒಂದು ಕೋಟಿ ಜನ ಸಂಚರಿಸುತ್ತಿದ್ದರು. ಆದರೆ ಅದರಲ್ಲಿ ಕೇವಲ ಶೇ 35ರಿಂದ 40ರಷ್ಟು ಮಾತ್ರ ಜನ ಪ್ರಯಾಣಿಸುತ್ತಿದ್ದಾರೆ. ಕೊರೊನಾದಿಂದ ಹೆಚ್ಚಿಗೆ ನಷ್ಟ ಸಂಭವಿಸಿರುವ ಸರ್ಕಾರಿ ಸಂಸ್ಥೆಗಳ ಪೈಕಿ ಸಾರಿಗೆ ಸಂಸ್ಥೆ ಮುಂಚೂಣಿಯಲ್ಲಿದೆ. ನಾಲ್ಕೂ ನಿಗಮಗಳಿಂದ ₹ 2760 ಕೋಟಿ ನಷ್ಟವಾಗಿದೆ. ದಿನಾಲು ₹ 1.5 ಕೋಟಿ ನಷ್ಟವಾಗಿದೆ. ಈಗ ಸೋರಿಕೆ ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸವದಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ಆಂಧ್ರಪ್ರದೇಶಕ್ಕೆ ಶೀಘ್ರವೇ ಬಸ್ ಸಂಚಾರ ಶುರುವಾಗಲಿದ್ದು, ಮುಂದಿನ ಒಂದು ವಾರದಲ್ಲಿ ತಮಿಳುನಾಡು, ಕೇರಳ, ತೆಲಂಗಾಣ ಹಾಗೂ ಗೋವಾ ರಾಜ್ಯಗಳಿಗೆ ಸಾರಿಗೆ ಸಂಸ್ಥೆಯ ಬಸ್ ಸಂಚಾರ ಆರಂಭಿಸಲಾಗುವುದು ಎಂದು ಸಾರಿಗೆ ಸಚಿವರೂ ಆದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪ್ರಕಟಿಸಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಹೊರತುಪಡಿಸಿ ಎಲ್ಲ ನೆರೆಯ ರಾಜ್ಯಗಳಿಗೆ ಪತ್ರ ಬರೆಯಲಾಗಿದೆ. ಈಗ ನೆರೆಯ ಆಂಧ್ರಪ್ರದೇಶ ಒಪ್ಪಿಗೆ ನೀಡಿದೆ. ಹೀಗಾಗಿ ಎರಡು–ಮೂರು ದಿನದೊಳಗೆ ಬಸ್ ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.</p>.<p>ನೆರೆಯ ರಾಜ್ಯಗಳಾದ ತಮಿಳುನಾಡು, ಪುದುಚೇರಿ, ಕೇರಳ, ತೆಲಂಗಾಣ ಸಾರಿಗೆ ಸಚಿವರಿಗೆ ಪತ್ರ ಬರೆಯಲಾಗಿದೆ. ಈಗ ಆಂಧ್ರಪ್ರದೇಶ ತನ್ನ ಒಪ್ಪಿಗೆ ನೀಡಿದೆ. ಅಧಿಕಾರಿಗಳೊಂದಿಗೆ ಚರ್ಚಿಸಿ ಬಸ್ ಸಂಚಾರ ಶುರು ಮಾಡಲಾಗುವುದು ಎಂದು ವಿವರಿಸಿದರು.</p>.<p>ಸಾರಿಗೆ ಸಂಸ್ಥೆಯ ಬಸ್ಗಳಲ್ಲಿ ನಿತ್ಯ ಒಂದು ಕೋಟಿ ಜನ ಸಂಚರಿಸುತ್ತಿದ್ದರು. ಆದರೆ ಅದರಲ್ಲಿ ಕೇವಲ ಶೇ 35ರಿಂದ 40ರಷ್ಟು ಮಾತ್ರ ಜನ ಪ್ರಯಾಣಿಸುತ್ತಿದ್ದಾರೆ. ಕೊರೊನಾದಿಂದ ಹೆಚ್ಚಿಗೆ ನಷ್ಟ ಸಂಭವಿಸಿರುವ ಸರ್ಕಾರಿ ಸಂಸ್ಥೆಗಳ ಪೈಕಿ ಸಾರಿಗೆ ಸಂಸ್ಥೆ ಮುಂಚೂಣಿಯಲ್ಲಿದೆ. ನಾಲ್ಕೂ ನಿಗಮಗಳಿಂದ ₹ 2760 ಕೋಟಿ ನಷ್ಟವಾಗಿದೆ. ದಿನಾಲು ₹ 1.5 ಕೋಟಿ ನಷ್ಟವಾಗಿದೆ. ಈಗ ಸೋರಿಕೆ ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸವದಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>