ಕಳೆದ ಡಿ.6ರಂದು ಕುರಿಕೋಟಾ ಸೇತುವೆ ಬಳಿ ತೆರಳಿ ತನ್ನ ಸಹೋದರಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿ ನದಿಗೆ ಹಾರಿದ್ದಾನೆ. ಸಂಬಂಧಿಕರು ಈ ಬಗ್ಗೆ ಮಹಾಗಾಂವ್ ಪೊಲೀಸರಿಗೆ ತಿಳಿಸಿದ್ದಾರೆ. ಅಂದಿನಿಂದ 3 ದಿನಗಳ ಕಾಲ ಅಗ್ನಿಶಾಮಕ ದಳದೊಂದಿಗೆ ಪೊಲೀಸರು ಪತ್ತೆ ಕಾರ್ಯ ಆರಂಭಿಸಿದ್ದು, ಬುಧವಾರ ಶವ ಪತ್ತೆಯಾಗಿದೆ ಎಂದು ಪಿಎಸ್ಐ ಹಸೇನ್ ಬಾಷಾ ತಿಳಿಸಿದ್ದಾರೆ. ಮಹಗಾಂವ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.