ಕಲಬುರ್ಗಿ: ಕಮಲಾಪುರ ತಾಲ್ಲೂಕಿನ ಮಹಾಗಾಂವ ಗ್ರಾಮದ ನಿವಾಸಿ, ನಿವೃತ್ತ ಪಶುವೈದ್ಯರಾದ ಡಾ.ಅಣ್ಣಪ್ಪ ಕಟ್ಟಿಮನಿ (65) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾದರು.
ಅವರಿಗೆ ಪತ್ನಿ, ಪುತ್ರಿ, ಮೂವರು ಪುತ್ರರು ಇದ್ದಾರೆ. ಶನಿವಾರ ಮಧ್ಯಾಹ್ನ 2ಕ್ಕೆ ಗ್ರಾಮದಲ್ಲಿರುವ ಸ್ವಂತ ಹೊಲದಲ್ಲಿ ಅಂತ್ಯಕ್ರಿಯೆ ನೇರವೆರಿಸಲಾಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.