ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಬುರಾವ ದೇಶಮಾನ್ಯೆ ನಿಧನ

Last Updated 10 ಜುಲೈ 2020, 16:07 IST
ಅಕ್ಷರ ಗಾತ್ರ

ಕಲಬುರ್ಗಿ: ಹಿರಿಯ ಸ್ವಾತಂತ್ರ್ಯ ಹೋರಾಟಗಾರ,ಜೇವರ್ಗಿ ತಾಲ್ಲೂಕಿನ ಕೋಬಾಳ ಗ್ರಾಮದ ಬಾಬುರಾವ ಶಂಕರರಾವ ದೇಶಮಾನ್ಯೆ (102) ಶುಕ್ರವಾರ ನಗರದಲ್ಲಿ ನಿಧನರಾದರು.

60 ವರ್ಷಗಳ ಹಿಂದೆ ಹೆಣ್ಣುಮಕ್ಕಳಿಗೆ ಶಿಕ್ಷಣದ ಅವಕಾಶವೇ ಇಲ್ಲದ ಸಂದರ್ಭದಲ್ಲಿ ತಮ್ಮ 7 ಪುತ್ರಿಯರಿಗೆ ಮತ್ತು ಒಬ್ಬ ಪುತ್ರನಿಗೆ ಉನ್ನತ ಶಿಕ್ಷಣ ಕೊಡಿಸಿದ್ದರು. 19ನೇ ವಯಸ್ಸಿನಲ್ಲಿಯೇ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕ್ಕಿದ್ದರು. ಆರ್ಯ ಸಮಾಜದ ಸಕ್ರಿಯ ಸದಸ್ಯರಾಗಿದ್ದಲ್ಲದೇ, ನಂತರ ಎಡಪಂಥೀಯ ಹೋರಾಟಗಳಲ್ಲಿ ಗುರುತಿಸಿಕೊಂಡಿದ್ದರು.

ಅಂತ್ಯಕ್ರಿಯೆ ಶನಿವಾರ ಬೆಳಿಗ್ಗೆ 11ಕ್ಕೆ ಕಲಬುರ್ಗಿಯ ಮುತ್ಯಾನ ಬಬಲಾದ ಗ್ರಾಮದ ಬಳಿಯ ಹೊಲದಲ್ಲಿ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT